<p><strong>ಬೆಂಗಳೂರು:</strong>ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಕಾನೂನು ವಿದ್ಯಾರ್ಥಿಗಳು, ವಕೀಲರು ಹಾಗೂ ಮಹಿಳಾ ಸಂಘಟನೆಗಳ 30 ಕಾರ್ಯಕರ್ತರು ಹೈಕೋರ್ಟ್ ಹಾಗೂ ಸಿಟಿ ಸಿವಿಲ್ ಕೋರ್ಟ್ ಎದುರು ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನಾಕಾರರು ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ‘ನೀನು ಎಷ್ಟೇ ಎತ್ತರದವನಾಗಿದ್ದರೂ, ಕಾನೂನು ನಿನಗಿಂತ ಶ್ರೇಷ್ಠ’, ‘ವಿಶೇಷ ತನಿಖಾ ಸಮಿತಿ ರಚಿಸಲು ಹಿಂದೇಟು’ ಎಂಬ ಫಲಕಗಳನ್ನು ಪ್ರದರ್ಶಿಸಿದರು.</p>.<p>‘ಕೋರ್ಟ್ ಮುಂದೆ ಪ್ರತಿಭಟನೆ ಮಾಡುವುದು ನಮಗೆ ತಿಳಿದಿರಲಿಲ್ಲ. ಪ್ರತಿಭಟನೆಗೆ ಅನುಮತಿ ಪಡೆಯದ ಕಾರಣ ಕೆಲವರನ್ನು ವಶಕ್ಕೆ ಪಡೆಯಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ವಕೀಲ ಅತೀಫ್, ‘ಲೈಂಗಿಕ ಕಿರುಕುಳದ ಆರೋಪ ಮಾಡಿದವರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ತೀರ್ಪಿನ ಪ್ರತಿಯನ್ನು ಸಹ ಆಕೆಗೆ ನೀಡಿಲ್ಲ. ಈ ವಿಷಯದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಅದಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಈ ಪ್ರಕರಣದಲ್ಲಿ ವಾದ ವಿವಾದಗಳು ಸರಿಯಾಗಿ ನಡೆದಿಲ್ಲ. ಸಂತ್ರಸ್ತೆಯನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ’ ಎಂದು ಲಿಂಗ ಸಮಾನತೆ ಪರ ಹೋರಾಟ ನಡೆಸುತ್ತಿರುವ ಗೋಪ್ಕಿಯಾ ಬಸಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.</p>.<p>ಕಾನೂನು ವಿದ್ಯಾರ್ಥಿಗಳು, ವಕೀಲರು ಹಾಗೂ ಮಹಿಳಾ ಸಂಘಟನೆಗಳ 30 ಕಾರ್ಯಕರ್ತರು ಹೈಕೋರ್ಟ್ ಹಾಗೂ ಸಿಟಿ ಸಿವಿಲ್ ಕೋರ್ಟ್ ಎದುರು ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನಾಕಾರರು ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ‘ನೀನು ಎಷ್ಟೇ ಎತ್ತರದವನಾಗಿದ್ದರೂ, ಕಾನೂನು ನಿನಗಿಂತ ಶ್ರೇಷ್ಠ’, ‘ವಿಶೇಷ ತನಿಖಾ ಸಮಿತಿ ರಚಿಸಲು ಹಿಂದೇಟು’ ಎಂಬ ಫಲಕಗಳನ್ನು ಪ್ರದರ್ಶಿಸಿದರು.</p>.<p>‘ಕೋರ್ಟ್ ಮುಂದೆ ಪ್ರತಿಭಟನೆ ಮಾಡುವುದು ನಮಗೆ ತಿಳಿದಿರಲಿಲ್ಲ. ಪ್ರತಿಭಟನೆಗೆ ಅನುಮತಿ ಪಡೆಯದ ಕಾರಣ ಕೆಲವರನ್ನು ವಶಕ್ಕೆ ಪಡೆಯಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ವಕೀಲ ಅತೀಫ್, ‘ಲೈಂಗಿಕ ಕಿರುಕುಳದ ಆರೋಪ ಮಾಡಿದವರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ತೀರ್ಪಿನ ಪ್ರತಿಯನ್ನು ಸಹ ಆಕೆಗೆ ನೀಡಿಲ್ಲ. ಈ ವಿಷಯದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಅದಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಈ ಪ್ರಕರಣದಲ್ಲಿ ವಾದ ವಿವಾದಗಳು ಸರಿಯಾಗಿ ನಡೆದಿಲ್ಲ. ಸಂತ್ರಸ್ತೆಯನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ’ ಎಂದು ಲಿಂಗ ಸಮಾನತೆ ಪರ ಹೋರಾಟ ನಡೆಸುತ್ತಿರುವ ಗೋಪ್ಕಿಯಾ ಬಸಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>