<p><strong>ಬೆಂಗಳೂರು:</strong> ಲೋಕೋಪಯೋಗಿ ಇಲಾಖೆಯಲ್ಲಿ ಬ್ಯಾಕ್ಲಾಗ್ ಹುದ್ದೆಗಳಿಗೆ ನೇಮಕವಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಎಂಜಿನಿಯರ್ಗಳಿಗೆ ಬಡ್ತಿ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ರಕ್ಷಣಾ ಒಕ್ಕೂಟದ ಅಧ್ಯಕ್ಷ ಎಚ್.ಇಂದ್ರಯ್ಯ ಆರೋಪಿಸಿದರು.</p>.<p>ಬಡ್ತಿಗೆ 10 ವರ್ಷಗಳಿಂದ ಅರ್ಹರಿದ್ದರೂತಾಂತ್ರಿಕ ಸಮಸ್ಯೆಗಳನ್ನುತಂದೊಡ್ಡಿ ಅನ್ಯಾಯ ಮಾಡಲಾಗುತ್ತಿದೆ. ಇದಕ್ಕೆ ಕಾರಣವಾಗಿರುವ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.</p>.<p>2003–04ರಲ್ಲಿ ಬ್ಯಾಕ್ಲಾಗ್ ಹುದ್ದೆಗಳಿಗೆ 118 ಸಹಾಯಕ ಎಂಜಿನಿಯರ್ಗಳ ನೇಮಕವಾಯಿತು. ಅವರು ನಾಲ್ಕು ವರ್ಷಗಳಿಂದ ಅರ್ಹರಿದ್ದರೂ ಬಡ್ತಿ ನೀಡಿಲ್ಲ. ಈ ಸಂಬಂಧ ಎಂಜಿನಿಯರ್ಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಪ್ರಮಾಣ ಪತ್ರವನ್ನು ಇಲಾಖೆ ನ್ಯಾಯಾಲಯಕ್ಕೆ ಸಲ್ಲಿಸಿದೆ. ಬಡ್ತಿ ಮೀಸಲಾತಿಯಪವಿತ್ರ ಪ್ರಕರಣಕ್ಕೂ ಈ ಎಂಜಿನಿಯರ್ಗಳಿಗೂ ಸಂಬಂಧ ಇಲ್ಲದಿದ್ದರೂ ಜ್ಯೇಷ್ಠತಾ ಸಂಖ್ಯೆ ನೀಡದೆ ತಾಂತ್ರಿಕ ಸಮಸ್ಯೆಗಳನ್ನು ಸೃಷ್ಟಿಸಲಾಗಿದೆ ಎಂದು ದೂರಿದರು.</p>.<p>‘ಜುಲೈ 8ಎಂದು ಎಚ್.ಡಿ. ರೇವಣ್ಣ ಅವರು ಡಿಪಿಸಿ (ಇಲಾಖಾ ಪದೋನ್ನತಿ ಸಮಿತಿ) ಸಭೆ ನಡೆಸಿದ್ದು, ಅಲ್ಲಿಯೂ ಈ ಎಂಜಿನಿಯರ್ಗಳನ್ನು ಪರಿಗಣಿಸದೆ ತಮಗೆ ಬೇಕಾದವರಿಗೆ, ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರಿಗೂ ಬಡ್ತಿ ನೀಡಲು ನಿರ್ಧರಿಸಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕೋಪಯೋಗಿ ಇಲಾಖೆಯಲ್ಲಿ ಬ್ಯಾಕ್ಲಾಗ್ ಹುದ್ದೆಗಳಿಗೆ ನೇಮಕವಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಎಂಜಿನಿಯರ್ಗಳಿಗೆ ಬಡ್ತಿ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ರಕ್ಷಣಾ ಒಕ್ಕೂಟದ ಅಧ್ಯಕ್ಷ ಎಚ್.ಇಂದ್ರಯ್ಯ ಆರೋಪಿಸಿದರು.</p>.<p>ಬಡ್ತಿಗೆ 10 ವರ್ಷಗಳಿಂದ ಅರ್ಹರಿದ್ದರೂತಾಂತ್ರಿಕ ಸಮಸ್ಯೆಗಳನ್ನುತಂದೊಡ್ಡಿ ಅನ್ಯಾಯ ಮಾಡಲಾಗುತ್ತಿದೆ. ಇದಕ್ಕೆ ಕಾರಣವಾಗಿರುವ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.</p>.<p>2003–04ರಲ್ಲಿ ಬ್ಯಾಕ್ಲಾಗ್ ಹುದ್ದೆಗಳಿಗೆ 118 ಸಹಾಯಕ ಎಂಜಿನಿಯರ್ಗಳ ನೇಮಕವಾಯಿತು. ಅವರು ನಾಲ್ಕು ವರ್ಷಗಳಿಂದ ಅರ್ಹರಿದ್ದರೂ ಬಡ್ತಿ ನೀಡಿಲ್ಲ. ಈ ಸಂಬಂಧ ಎಂಜಿನಿಯರ್ಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಪ್ರಮಾಣ ಪತ್ರವನ್ನು ಇಲಾಖೆ ನ್ಯಾಯಾಲಯಕ್ಕೆ ಸಲ್ಲಿಸಿದೆ. ಬಡ್ತಿ ಮೀಸಲಾತಿಯಪವಿತ್ರ ಪ್ರಕರಣಕ್ಕೂ ಈ ಎಂಜಿನಿಯರ್ಗಳಿಗೂ ಸಂಬಂಧ ಇಲ್ಲದಿದ್ದರೂ ಜ್ಯೇಷ್ಠತಾ ಸಂಖ್ಯೆ ನೀಡದೆ ತಾಂತ್ರಿಕ ಸಮಸ್ಯೆಗಳನ್ನು ಸೃಷ್ಟಿಸಲಾಗಿದೆ ಎಂದು ದೂರಿದರು.</p>.<p>‘ಜುಲೈ 8ಎಂದು ಎಚ್.ಡಿ. ರೇವಣ್ಣ ಅವರು ಡಿಪಿಸಿ (ಇಲಾಖಾ ಪದೋನ್ನತಿ ಸಮಿತಿ) ಸಭೆ ನಡೆಸಿದ್ದು, ಅಲ್ಲಿಯೂ ಈ ಎಂಜಿನಿಯರ್ಗಳನ್ನು ಪರಿಗಣಿಸದೆ ತಮಗೆ ಬೇಕಾದವರಿಗೆ, ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರಿಗೂ ಬಡ್ತಿ ನೀಡಲು ನಿರ್ಧರಿಸಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>