ರೈತ ಸಂಘ ಮತ್ತು ಹಸಿರುಸೇನೆ ವತಿ ಯಿಂದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರ್ಯಾಲಿ ಮೂಲಕ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕದ 5 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಯಿದೆ. ಬೃಹತ್ ಮೆರವಣಿಗೆ ನಡೆಯಲಿರುವುದರಿಂದ ಕಾರ್ಪೋರೇಷನ್, ಮೆಜೆಸ್ಟಿಕ್, ವಿಧಾನಸೌಧ ಸುತ್ತಮುತ್ತ ಹಾಗೂ ಶೇಷಾದ್ರಿಪುರಂ ಬಳಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.