<p><strong>ಬೆಂಗಳೂರು:</strong> ಶೇ 74ರವರೆಗಿನ ಅಂಗವಿಕಲತೆ ಹೊಂದಿದವರಿಗೆ ಮಾಸಿಕ ₹ 3 ಸಾವಿರ, ಅದಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿದವರಿಗೆ ₹ 5 ಸಾವಿರ ಜೀವನ ಭತ್ಯೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ<br />ಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವತಿಯಿಂದ ಬುಧವಾರ ಪ್ರತಿಭಟನಾ ರ್ಯಾಲಿ ನಡೆಯಿತು.</p>.<p>ಮೈಸೂರು ಬ್ಯಾಂಕ್ ಬಳಿ ಇರುವ ಕಾನೂನು ಕಾಲೇಜಿನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ 20 ಜಿಲ್ಲೆಗಳಿಂದ ಬಂದ ಒಂದು ಸಾವಿರಕ್ಕೂ ಹೆಚ್ಚು ಅಂಗವಿಕಲರು ಮತ್ತು ಪೋಷಕರು ಭಾಗವಹಿಸಿದ್ದರು.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಮಾವೇಶದಲ್ಲಿ ಒಕ್ಕೂಟದ ಅಧ್ಯಕ್ಷ ಜಿ.ಎನ್. ನಾಗರಾಜ್ ಮಾತನಾಡಿ, ‘ಅಂಗವಿಕಲರಿಗೆ ಸರ್ಕಾರ ಸದ್ಯ ನೀಡುತ್ತಿರುವ ₹ 600 ಮತ್ತು ₹ 1,400 ಮಾಸಾಶನ ಯಾವುದಕ್ಕೂ ಸಾಕಾಗುವುದಿಲ್ಲ. ಇದನ್ನು ಕನಿಷ್ಠ ₹ 5 ಸಾವಿರಕ್ಕೆ ಏರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ–2016 ರಚನೆಯಾಗಿ ಮೂರು ವರ್ಷ ಕಳೆದರೂ ಜಾರಿಗೆ ಬಂದಿಲ್ಲ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯ ಮತ್ತು ಆಯ–ವ್ಯಯದಲ್ಲಿ ಹಣ ಮೀಸಲಿಡದೇ ಇರುವುದು ಕಾರಣ. ಕಾಯ್ದೆ ಜಾರಿಗೆ ತರುವ ವಿಷಯದಲ್ಲಿ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು’ ಎಂದೂ ಅವರು ಆಗ್ರಹಿಸಿದರು.</p>.<p>‘ಅಂಗವಿಕಲರ ಪುನರ್ವಸತಿಗೆ ಕನಿಷ್ಠ ವೇತನ ₹ 18 ಸಾವಿರ ನೀಡಬೇಕು. ತೀವ್ರ ಅಂಗವಿಕಲತೆ ಅನುಭವಿಸುತ್ತಿರುವವರನ್ನು ನೋಡಿಕೊಳ್ಳುತ್ತಿರುವ ಪೋಷಕರಿಗೆ ₹ 3 ಸಾವಿರ ನೀಡಬೇಕು. ಅಂಗವಿಕಲರು ಮದುವೆಯಾದರೆ ಕನಿಷ್ಠ ₹ 3 ಲಕ್ಷದವರೆಗೆ ಪ್ರೋತ್ಸಾಹ ಧನ ನೀಡಬೇಕು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಂಗಪ್ಪ ದಾಸರ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶೇ 74ರವರೆಗಿನ ಅಂಗವಿಕಲತೆ ಹೊಂದಿದವರಿಗೆ ಮಾಸಿಕ ₹ 3 ಸಾವಿರ, ಅದಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿದವರಿಗೆ ₹ 5 ಸಾವಿರ ಜೀವನ ಭತ್ಯೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ<br />ಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವತಿಯಿಂದ ಬುಧವಾರ ಪ್ರತಿಭಟನಾ ರ್ಯಾಲಿ ನಡೆಯಿತು.</p>.<p>ಮೈಸೂರು ಬ್ಯಾಂಕ್ ಬಳಿ ಇರುವ ಕಾನೂನು ಕಾಲೇಜಿನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ 20 ಜಿಲ್ಲೆಗಳಿಂದ ಬಂದ ಒಂದು ಸಾವಿರಕ್ಕೂ ಹೆಚ್ಚು ಅಂಗವಿಕಲರು ಮತ್ತು ಪೋಷಕರು ಭಾಗವಹಿಸಿದ್ದರು.</p>.<p>ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಮಾವೇಶದಲ್ಲಿ ಒಕ್ಕೂಟದ ಅಧ್ಯಕ್ಷ ಜಿ.ಎನ್. ನಾಗರಾಜ್ ಮಾತನಾಡಿ, ‘ಅಂಗವಿಕಲರಿಗೆ ಸರ್ಕಾರ ಸದ್ಯ ನೀಡುತ್ತಿರುವ ₹ 600 ಮತ್ತು ₹ 1,400 ಮಾಸಾಶನ ಯಾವುದಕ್ಕೂ ಸಾಕಾಗುವುದಿಲ್ಲ. ಇದನ್ನು ಕನಿಷ್ಠ ₹ 5 ಸಾವಿರಕ್ಕೆ ಏರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ–2016 ರಚನೆಯಾಗಿ ಮೂರು ವರ್ಷ ಕಳೆದರೂ ಜಾರಿಗೆ ಬಂದಿಲ್ಲ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯ ಮತ್ತು ಆಯ–ವ್ಯಯದಲ್ಲಿ ಹಣ ಮೀಸಲಿಡದೇ ಇರುವುದು ಕಾರಣ. ಕಾಯ್ದೆ ಜಾರಿಗೆ ತರುವ ವಿಷಯದಲ್ಲಿ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು’ ಎಂದೂ ಅವರು ಆಗ್ರಹಿಸಿದರು.</p>.<p>‘ಅಂಗವಿಕಲರ ಪುನರ್ವಸತಿಗೆ ಕನಿಷ್ಠ ವೇತನ ₹ 18 ಸಾವಿರ ನೀಡಬೇಕು. ತೀವ್ರ ಅಂಗವಿಕಲತೆ ಅನುಭವಿಸುತ್ತಿರುವವರನ್ನು ನೋಡಿಕೊಳ್ಳುತ್ತಿರುವ ಪೋಷಕರಿಗೆ ₹ 3 ಸಾವಿರ ನೀಡಬೇಕು. ಅಂಗವಿಕಲರು ಮದುವೆಯಾದರೆ ಕನಿಷ್ಠ ₹ 3 ಲಕ್ಷದವರೆಗೆ ಪ್ರೋತ್ಸಾಹ ಧನ ನೀಡಬೇಕು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಂಗಪ್ಪ ದಾಸರ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>