<p><strong>ಬೆಂಗಳೂರು:</strong> ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರೋಧಿಸಿ ಟ್ಯಾನರಿ ರಸ್ತೆಯಲ್ಲಿ ನಡೆಯುತ್ತಿರುವ‘ಬಿಲಾಲ್ ಬಾಗ್’ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ ಏಳನೇ ದಿನ ಪೂರೈಸಿತು.</p>.<p>ಧರಣಿಯ ಸ್ಥಳಕ್ಕೆನಟ ನಾಸೀರುದ್ದೀನ್ ಶಾ ಹಾಗೂಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಹಲವು ದಿನಗಳಿಂದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ರಸ್ತೆಯಲ್ಲೇ ಕುಳಿತು ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡುತ್ತಿರುವುದನ್ನು ಹೊಗಳಿದರು.</p>.<p>‘ಸಿಎಎ ಹಾಗೂ ಎನ್ಆರ್ಸಿ ದೇಶಕ್ಕೆ ಮಾರಕವಾದದ್ದು. ಇದರ ವಿರುದ್ಧ ಇಡೀ ದೇಶವೇ ಹೋರಾಟ ಮಾಡುತ್ತಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟವೂ ಪ್ರಮುಖವಾದದ್ದು’ ಎಂದು ಮೇವಾನಿ ಹೇಳಿದರು.</p>.<p>ವಿದ್ಯಾರ್ಥಿಗಳು ಹಾಗೂ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿದೆಹಲಿಯ ‘ಶಾಹೀನ್ ಬಾಗ್’ ಮಾದರಿಯಲ್ಲಿ ಈ ಧರಣಿ ಹಮ್ಮಿಕೊಳ್ಳಲಾಗಿದೆ. ದಿನವೂ ವಿಶೇಷ ಕಾರ್ಯಕ್ರಮ ಹಾಗೂ ಘೋಷಣೆಗಳ ಮೂಲಕ ಕಾಯ್ದೆಯನ್ನು ವಿರೋಧಿಸಲಾಗುತ್ತಿದೆ.</p>.<p class="Subhead"><strong>ಟಿಪ್ಪು ಮಸೀದಿ ಬಳಿ ಪ್ರತಿಭಟನೆ: </strong>ಹೆಗಡೆ ನಗರದಲ್ಲಿರುವ ಟಿಪ್ಪು ಮಸೀದಿ ಬಳಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>’ಸಿಎಎ ಹಾಗೂ ಎನ್ಆರ್ಸಿ ಬೇಡವೇ ಬೇಡ’, ‘ಸಿಎಎ ತಿರಸ್ಕರಿಸಿ’, ‘ಸಂವಿಧಾನ ರಕ್ಷಿಸಿ’ ಹಾಗೂ ‘ದೇಶ ಒಡೆಯಬೇಡಿ’ ಎಂಬ ಫಲಕಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು.</p>.<p>‘ಸರ್ವ ಜನಾಂಗದ ಶಾಂತಿಯುತ ತೋಟವಾದ ದೇಶವನ್ನು ಒಡೆಯಲು ಈ ಕಾಯ್ದೆ ತರಲಾಗಿದೆ. ಇದರಿಂದ ದೇಶದಲ್ಲಿ ಅಶಾಂತಿ ವಾತಾವರಣ ನಿರ್ಮಿಸಲಾಗುತ್ತಿದೆ. ಇದರ ಹಿಂದೆ ದೇಶವನ್ನು ಒಡೆದು ಆಳುವ ವ್ಯವಸ್ಥಿತ ಸಂಚು ಇರುವಂತೆ ಕಾಣುತ್ತಿದೆ’ ಎಂದು ಪ್ರತಿಟನಾಕಾರರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರೋಧಿಸಿ ಟ್ಯಾನರಿ ರಸ್ತೆಯಲ್ಲಿ ನಡೆಯುತ್ತಿರುವ‘ಬಿಲಾಲ್ ಬಾಗ್’ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ ಏಳನೇ ದಿನ ಪೂರೈಸಿತು.</p>.<p>ಧರಣಿಯ ಸ್ಥಳಕ್ಕೆನಟ ನಾಸೀರುದ್ದೀನ್ ಶಾ ಹಾಗೂಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಹಲವು ದಿನಗಳಿಂದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ರಸ್ತೆಯಲ್ಲೇ ಕುಳಿತು ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡುತ್ತಿರುವುದನ್ನು ಹೊಗಳಿದರು.</p>.<p>‘ಸಿಎಎ ಹಾಗೂ ಎನ್ಆರ್ಸಿ ದೇಶಕ್ಕೆ ಮಾರಕವಾದದ್ದು. ಇದರ ವಿರುದ್ಧ ಇಡೀ ದೇಶವೇ ಹೋರಾಟ ಮಾಡುತ್ತಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟವೂ ಪ್ರಮುಖವಾದದ್ದು’ ಎಂದು ಮೇವಾನಿ ಹೇಳಿದರು.</p>.<p>ವಿದ್ಯಾರ್ಥಿಗಳು ಹಾಗೂ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿದೆಹಲಿಯ ‘ಶಾಹೀನ್ ಬಾಗ್’ ಮಾದರಿಯಲ್ಲಿ ಈ ಧರಣಿ ಹಮ್ಮಿಕೊಳ್ಳಲಾಗಿದೆ. ದಿನವೂ ವಿಶೇಷ ಕಾರ್ಯಕ್ರಮ ಹಾಗೂ ಘೋಷಣೆಗಳ ಮೂಲಕ ಕಾಯ್ದೆಯನ್ನು ವಿರೋಧಿಸಲಾಗುತ್ತಿದೆ.</p>.<p class="Subhead"><strong>ಟಿಪ್ಪು ಮಸೀದಿ ಬಳಿ ಪ್ರತಿಭಟನೆ: </strong>ಹೆಗಡೆ ನಗರದಲ್ಲಿರುವ ಟಿಪ್ಪು ಮಸೀದಿ ಬಳಿಯೂ ಶುಕ್ರವಾರ ಪ್ರತಿಭಟನೆ ನಡೆಯಿತು.</p>.<p>’ಸಿಎಎ ಹಾಗೂ ಎನ್ಆರ್ಸಿ ಬೇಡವೇ ಬೇಡ’, ‘ಸಿಎಎ ತಿರಸ್ಕರಿಸಿ’, ‘ಸಂವಿಧಾನ ರಕ್ಷಿಸಿ’ ಹಾಗೂ ‘ದೇಶ ಒಡೆಯಬೇಡಿ’ ಎಂಬ ಫಲಕಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು.</p>.<p>‘ಸರ್ವ ಜನಾಂಗದ ಶಾಂತಿಯುತ ತೋಟವಾದ ದೇಶವನ್ನು ಒಡೆಯಲು ಈ ಕಾಯ್ದೆ ತರಲಾಗಿದೆ. ಇದರಿಂದ ದೇಶದಲ್ಲಿ ಅಶಾಂತಿ ವಾತಾವರಣ ನಿರ್ಮಿಸಲಾಗುತ್ತಿದೆ. ಇದರ ಹಿಂದೆ ದೇಶವನ್ನು ಒಡೆದು ಆಳುವ ವ್ಯವಸ್ಥಿತ ಸಂಚು ಇರುವಂತೆ ಕಾಣುತ್ತಿದೆ’ ಎಂದು ಪ್ರತಿಟನಾಕಾರರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>