ಹೆಸರಘಟ್ಟ: ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ರಾಜಾನುಕುಂಟೆ ಕಾಂಗ್ರೆಸ್ ಮುಖಂಡರು ಗ್ಯಾಸ್ ಸಿಲಿಂಡರ್ಗಳನ್ನು ತಲೆಯ ಮೇಲೆ ಹೊತ್ತು ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚೊಕ್ಕನಹಳ್ಳಿ ವೆಂಕಟೇಶ್,‘ಕೋವಿಡ್ನಿಂದ ಜನ ಉದ್ಯೋಗವಿಲ್ಲದೆ ಪರದಾಡುತ್ತಾರೆ. ಈ ವೇಳೆ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನರ ನೆಮ್ಮದಿಯನ್ನು ಕಸಿಯುತ್ತಿದೆ’ ಎಂದು ದೂರಿದರು.
ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಲಾವಣ್ಯ ಮಾತನಾಡಿದರು.