<p><strong>ಬೆಂಗಳೂರು</strong>: ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮಾವೇಶದಲ್ಲಿ ಮಹಾರಾಷ್ಟ್ರ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರ ವಿರುದ್ದ ಧಿಕ್ಕಾರ ಕೂಗಿದ ಘಟನೆ ಶುಕ್ರವಾರ ನಡೆಯಿತು.</p>.<p>ಅಂತರರಾಷ್ಟ್ರೀಯ ಲಿಂಗಾಯತ ಯೂತ್ ಫೋರಂ ಆಯೋಜಿಸಿರುವ ಸಮಾವೇಶದಲ್ಲಿ ಸಾವಯವ ಕೃಷಿ ಕುರಿತು ಉಪನ್ಯಾಸ ನೀಡಲು ಸ್ವಾಮೀಜಿ ಬಂದಿದ್ದರು. ಅವರು ಭಾಷಣ ಆರಂಭಿಸುತ್ತಿದ್ದಂತೆ ಕೆಲವರು ಸ್ವಾಮೀಜಿ ವಿರುದ್ದ ಘೋಷಣೆ ಕೂಗಿದರು.</p>.<p>ಈ ವೇಳೆ ಸ್ವಾಮೀಜಿ ಭಾಷಣ ಮುಂದುವರಿಸಿ ಸರ್ವಜ್ಞರ ವಚನವೊಂದನ್ನು ಉಲ್ಲೇಖಿಸಿದರು. ಆಗ ಧಿಕ್ಕಾರ ಘೋಷಣೆ ಜೋರಾಯಿತು.</p>.<p>ಪ್ರತಿಭಟನೆಗೆ ಮುಂದಾದವರನ್ನು ಹೊರಕ್ಕೆ ಹೋಗುವಂತೆ ಸಂಘಟಕರು ಹಾಗೂ ಪೊಲೀಸರು ಸೂಚಿಸಿದರು. ಆದರೂ ಘೋಷಣೆ ಕೂಗುವುದು ನಿಲ್ಲಿಸಲಿಲ್ಲ. ಆಗ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. </p>.<p>‘ಸ್ವಾಮೀಜಿ ಅವರು ಬಸವ ಅನುಯಾಯಿಗಳನ್ನು ತಾಲಿಬಾನಿಗಳು ಎಂದು ಜರಿದಿದ್ದಾರೆ. ಲಿಂಗಾಯತ ಮಠಾಧೀಶರ ವಿರುದ್ದ ಅಶ್ಲೀಲ ಪದಗಳನ್ನು ಬಳಸಿದ್ದಾರೆ. ಅಂತಹವರನ್ನು ಸಮಾವೇಶಕ್ಕೆ ಕರೆಯಬೇಡಿ ಎಂದು ತಿಳಿಸಿದರೂ ಏಕೆ ಆಹ್ವಾನಿಸಿದ್ದೀರಿ’ ಎಂದು ಪ್ರತಿಭಟನನಿರತರು ಪ್ರಶ್ನಿಸಿದರು.</p>.<p>ಕೊನೆಗೆ 20ಕ್ಕೂ ಹೆಚ್ಚು ಮಂದಿಯನ್ನು ವೇದಿಕೆ ಮುಂಭಾಗದಿಂದ ಹೊರಕ್ಕೆ ಕಳುಹಿಸಿದ ನಂತರ ಕಾರ್ಯಕ್ರಮ ಮುಂದುವರಿಯಿತು. ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರು ಕೃಷಿ ಕುರಿತ ಭಾಷಣವನ್ನು ಮುಗಿಸಿದರು.</p>.<p>‘ಮೊದಲೇ ತೀರ್ಮಾನಿಸಿದಂತೆ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಕೃಷಿ ಕುರಿತಾಗಿ ಮಾತನಾಡಲು ಆಹ್ವಾನಿಸಿದ್ದೇವೆ. ಅವರು ಆಗಮಿಸಿ ಅದೇ ವಿಷಯದ ಕುರಿತು ಮಾತನಾಡುತ್ತಿದ್ದರು. ಕೆಲವರು ವಿರೋಧ ವ್ಯಕ್ತಪಡಿಸಿದ್ದು ಕಂಡು ಬಂದಿತು. ಅಂತವರನ್ನು ಹೊರಕ್ಕೆ ಕಳುಹಿಸಲಾಯಿತು’ ಎಂದು ಸಂಘಟಕರೊಬ್ಬರು ತಿಳಿಸಿದರು.</p>.<p>ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರು ಮೂರು ತಿಂಗಳ ಹಿಂದೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ವಿಜಯಪುರ ಜಿಲ್ಲೆಯಿಂದ ಗಡಿಪಾರು ಮಾಡಲಾಗಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ಕೂಡ ಸಂಯಮದಿಂದ ಮಾತನಾಡುವಂತೆ ಸ್ವಾಮೀಜಿ ಅವರಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮಾವೇಶದಲ್ಲಿ ಮಹಾರಾಷ್ಟ್ರ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರ ವಿರುದ್ದ ಧಿಕ್ಕಾರ ಕೂಗಿದ ಘಟನೆ ಶುಕ್ರವಾರ ನಡೆಯಿತು.</p>.<p>ಅಂತರರಾಷ್ಟ್ರೀಯ ಲಿಂಗಾಯತ ಯೂತ್ ಫೋರಂ ಆಯೋಜಿಸಿರುವ ಸಮಾವೇಶದಲ್ಲಿ ಸಾವಯವ ಕೃಷಿ ಕುರಿತು ಉಪನ್ಯಾಸ ನೀಡಲು ಸ್ವಾಮೀಜಿ ಬಂದಿದ್ದರು. ಅವರು ಭಾಷಣ ಆರಂಭಿಸುತ್ತಿದ್ದಂತೆ ಕೆಲವರು ಸ್ವಾಮೀಜಿ ವಿರುದ್ದ ಘೋಷಣೆ ಕೂಗಿದರು.</p>.<p>ಈ ವೇಳೆ ಸ್ವಾಮೀಜಿ ಭಾಷಣ ಮುಂದುವರಿಸಿ ಸರ್ವಜ್ಞರ ವಚನವೊಂದನ್ನು ಉಲ್ಲೇಖಿಸಿದರು. ಆಗ ಧಿಕ್ಕಾರ ಘೋಷಣೆ ಜೋರಾಯಿತು.</p>.<p>ಪ್ರತಿಭಟನೆಗೆ ಮುಂದಾದವರನ್ನು ಹೊರಕ್ಕೆ ಹೋಗುವಂತೆ ಸಂಘಟಕರು ಹಾಗೂ ಪೊಲೀಸರು ಸೂಚಿಸಿದರು. ಆದರೂ ಘೋಷಣೆ ಕೂಗುವುದು ನಿಲ್ಲಿಸಲಿಲ್ಲ. ಆಗ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. </p>.<p>‘ಸ್ವಾಮೀಜಿ ಅವರು ಬಸವ ಅನುಯಾಯಿಗಳನ್ನು ತಾಲಿಬಾನಿಗಳು ಎಂದು ಜರಿದಿದ್ದಾರೆ. ಲಿಂಗಾಯತ ಮಠಾಧೀಶರ ವಿರುದ್ದ ಅಶ್ಲೀಲ ಪದಗಳನ್ನು ಬಳಸಿದ್ದಾರೆ. ಅಂತಹವರನ್ನು ಸಮಾವೇಶಕ್ಕೆ ಕರೆಯಬೇಡಿ ಎಂದು ತಿಳಿಸಿದರೂ ಏಕೆ ಆಹ್ವಾನಿಸಿದ್ದೀರಿ’ ಎಂದು ಪ್ರತಿಭಟನನಿರತರು ಪ್ರಶ್ನಿಸಿದರು.</p>.<p>ಕೊನೆಗೆ 20ಕ್ಕೂ ಹೆಚ್ಚು ಮಂದಿಯನ್ನು ವೇದಿಕೆ ಮುಂಭಾಗದಿಂದ ಹೊರಕ್ಕೆ ಕಳುಹಿಸಿದ ನಂತರ ಕಾರ್ಯಕ್ರಮ ಮುಂದುವರಿಯಿತು. ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರು ಕೃಷಿ ಕುರಿತ ಭಾಷಣವನ್ನು ಮುಗಿಸಿದರು.</p>.<p>‘ಮೊದಲೇ ತೀರ್ಮಾನಿಸಿದಂತೆ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಕೃಷಿ ಕುರಿತಾಗಿ ಮಾತನಾಡಲು ಆಹ್ವಾನಿಸಿದ್ದೇವೆ. ಅವರು ಆಗಮಿಸಿ ಅದೇ ವಿಷಯದ ಕುರಿತು ಮಾತನಾಡುತ್ತಿದ್ದರು. ಕೆಲವರು ವಿರೋಧ ವ್ಯಕ್ತಪಡಿಸಿದ್ದು ಕಂಡು ಬಂದಿತು. ಅಂತವರನ್ನು ಹೊರಕ್ಕೆ ಕಳುಹಿಸಲಾಯಿತು’ ಎಂದು ಸಂಘಟಕರೊಬ್ಬರು ತಿಳಿಸಿದರು.</p>.<p>ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರು ಮೂರು ತಿಂಗಳ ಹಿಂದೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ವಿಜಯಪುರ ಜಿಲ್ಲೆಯಿಂದ ಗಡಿಪಾರು ಮಾಡಲಾಗಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ಕೂಡ ಸಂಯಮದಿಂದ ಮಾತನಾಡುವಂತೆ ಸ್ವಾಮೀಜಿ ಅವರಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>