<p><strong>ಕೆ.ಆರ್.ಪುರ:</strong> ಜಾತಿನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಕಾರ್ಯಕರ್ತರು ವೈಟ್ಫೀಲ್ಡ್ ಉಪ ವಿಭಾಗದ ಡಿಸಿಪಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಮುನಿರತ್ನ ಅವರು ದಲಿತ ಸಮುದಾಯವನ್ನು ಅಪಮಾನ ಮಾಡಿದ್ದಾರೆ. ಅಲ್ಲದೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಸಮಾಜ ತಲೆತಗ್ಗಿಸುವ ಘಟನೆಗೆ ಸಾಕ್ಷಿಯಾಗಿದೆ ಎಂದು ಸಮಿತಿಯ ಬೆಂಗಳೂರು ವಿಭಾಗೀಯ ಉಪ ಪ್ರಧಾನ ಸಂಚಾಲಕ ಮಣಿಪಾಲ್ ರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 70 ಸಾವಿರ ದಲಿತ ಸಮುದಾಯದ ಮತದಾರರಿದ್ದು ಅವರ ಮತ ಪಡೆದು ಗೆದ್ದಿದ್ದಾರೆ. ಅಧಿಕಾರ ಸಿಕ್ಕ ತಕ್ಷಣ ದಲಿತರನ್ನು ಅತ್ಯಂತ ಕೀಳುಮಟ್ಟದಲ್ಲಿ ನಡೆಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. </p>.<p>ಪ್ರಧಾನ ಸಂಚಾಲಕ ವಿ.ಗೋವಿಂದ ಕುಮಾರ್ ಅವರು ಮಾತನಾಡಿ, ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಸವಾಲು ಹಾಕಿದರು.</p>.<p>ಆದೂರು ಮಂಜುನಾಥ್, ದಶರಥ ಕೋಟೆ, ನಾರಾಯಣಸ್ವಾಮಿ, ಕೆ.ಮಂಜು ಪಣತ್ತೂರು ದಿನ್ನೆ, ರಾಜೇಂದ್ರ, ವೆಂಕಟೇಶ, ರಮೇಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಜಾತಿನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಕಾರ್ಯಕರ್ತರು ವೈಟ್ಫೀಲ್ಡ್ ಉಪ ವಿಭಾಗದ ಡಿಸಿಪಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಮುನಿರತ್ನ ಅವರು ದಲಿತ ಸಮುದಾಯವನ್ನು ಅಪಮಾನ ಮಾಡಿದ್ದಾರೆ. ಅಲ್ಲದೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಸಮಾಜ ತಲೆತಗ್ಗಿಸುವ ಘಟನೆಗೆ ಸಾಕ್ಷಿಯಾಗಿದೆ ಎಂದು ಸಮಿತಿಯ ಬೆಂಗಳೂರು ವಿಭಾಗೀಯ ಉಪ ಪ್ರಧಾನ ಸಂಚಾಲಕ ಮಣಿಪಾಲ್ ರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 70 ಸಾವಿರ ದಲಿತ ಸಮುದಾಯದ ಮತದಾರರಿದ್ದು ಅವರ ಮತ ಪಡೆದು ಗೆದ್ದಿದ್ದಾರೆ. ಅಧಿಕಾರ ಸಿಕ್ಕ ತಕ್ಷಣ ದಲಿತರನ್ನು ಅತ್ಯಂತ ಕೀಳುಮಟ್ಟದಲ್ಲಿ ನಡೆಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. </p>.<p>ಪ್ರಧಾನ ಸಂಚಾಲಕ ವಿ.ಗೋವಿಂದ ಕುಮಾರ್ ಅವರು ಮಾತನಾಡಿ, ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಸವಾಲು ಹಾಕಿದರು.</p>.<p>ಆದೂರು ಮಂಜುನಾಥ್, ದಶರಥ ಕೋಟೆ, ನಾರಾಯಣಸ್ವಾಮಿ, ಕೆ.ಮಂಜು ಪಣತ್ತೂರು ದಿನ್ನೆ, ರಾಜೇಂದ್ರ, ವೆಂಕಟೇಶ, ರಮೇಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>