<figcaption>""</figcaption>.<p><strong>ಬೆಂಗಳೂರು</strong>: ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹಾಗೂ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರೋಧಿಸಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.</p>.<p>ಆಲ್ ಮಜೀದ್ ಸಮಿತಿ ನೇತೃತ್ವದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಏರ್ಪಡಿಸಿದ್ದ ‘ಭಾರತ ಉಳಿಸಿ, ಸಂವಿಧಾನ ರಕ್ಷಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾವಿರಾರು ಜನರು, ಸಿಎಆರ್, ಎನ್ಆರ್ಸಿ, ಎನ್ಪಿಆರ್ ವಿರುದ್ಧದ ಘೋಷಣೆಗಳನ್ನು ಕೂಗಿದರು.</p>.<p>‘ದೇಶದ ಜಾತ್ಯತೀತ ಮೌಲ್ಯಗಳನ್ನು ಬುಡಮೇಲು ಮಾಡುವ ಕುತಂತ್ರದಿಂದ ಕೇಂದ್ರ ಸರ್ಕಾರ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೆ ತಂದಿರುವುದು ಸ್ಪಷ್ಟವಾಗುತ್ತದೆ.ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದ ಮುಸ್ಲಿಮೇತರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇವುಗಳನ್ನು ತರಲಾಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ನಮ್ಮದು ರಾಜ್ಯಾಂಗ ಆಧಾರದ ಮೇಲೆ ರಚಿಸಿದ ದೇಶವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲ ಜಾತಿ, ವರ್ಗದ ಜನ ಪ್ರಾಣ ಕೊಟ್ಟಿದ್ದಾರೆ. ಪೌರತ್ವ ನೋಂದಣಿಯ ನೆಪದಲ್ಲಿ ಸಮಾಜವನ್ನು ಒಡೆಯುವುದು ಬೇಡ’ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಆಗ್ರಹಿಸಿದರು.</p>.<p>‘ಸಿಎಎ ಮತ್ತು ಎನ್ಆರ್ಸಿಯಿಂದ ತೊಂದರೆ ಇಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ತಾಯಿಯ ಬಳಿ ಪೌರತ್ವ ನೋಂದಣಿಗೆ ಅಗತ್ಯವಿರುವ ದಾಖಲೆ ಇದೆಯೇ ಎಂಬುದನ್ನು ಮೊದಲು ಬಹಿರಂಗಪಡಿಸಲಿ’ ಎಂದು ಶಾಸಕ ಜಮೀರ್ ಅಹಮದ್ ಖಾನ್ ಸವಾಲು ಹಾಕಿದರು.</p>.<p>ಪಾಕಿಸ್ತಾನದಲ್ಲಿ ನೂರು ವರ್ಷ ಜೀವಿಸುವ ಬದಲು, ಜಾತ್ಯತೀತವಾದ ಭಾರತದಲ್ಲಿ ಒಂದು ದಿನ ಜೀವಿಸಿದರೆ ಸಾಕು ಎನ್ನುವ ಭಾವನೆ ನಮ್ಮಲಿದೆ. ಆದರೆ, ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಈ ಭಾವನೆಗಳಿಗೆ ಹುಳಿ ಹಿಂಡುತ್ತಿದ್ದಾರೆ’ ಎಂದು ಗೋರಿಪಾಳ್ಯದ ಫಾರೂಖಿಯಾ ಮಸೀದಿಯ ಮೌಲಾನಪಿ.ಎಂ.ಮುಜಮಿಲ್ ನುಡಿದರು.</p>.<p>ಪ್ರತಿಭಟನೆ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳಿಲ್ಲದೆ ಸಭೆ ಶಾಂತಿಯುತವಾಗಿ ಮುಕ್ತಾಯವಾಯಿತು. ಇದಕ್ಕೂ ಮೊದಲು ಮೆರವಣಿಗೆ ನಡೆಸಲಾಯಿತು.</p>.<p>ಮೈಸೂರು ರಸ್ತೆ ಸೇರಿದಂತೆ ಸಮಾವೇಶ ನಡೆಯುತ್ತಿದ್ದ ಮೈದಾನದ ಸಮೀಪದ ಎಲ್ಲ ರಸ್ತೆಗಳಲ್ಲೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಚಾಲಕರು ಮುಂದೆ ಸಾಗಲು ಹರಸಾಹಸ ಪಡುತ್ತಿದ್ದುದು ಕಂಡುಬಂತು.</p>.<p><strong>ಮೊಳಗಿದ ರಾಷ್ಟ್ರಗೀತೆ...</strong><br />ಸಭೆ ಆರಂಭಿಸುವ ಮೊದಲುಪ್ರತಿಭಟನಾಕಾರರು ರಾಷ್ಟ್ರಗೀತೆ ಹಾಡಿದರು.ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ತ್ರಿವರ್ಣ ಧ್ವಜಗಳು ಹಾರಾಡಿದವು. ಅನೇಕರು ಭುಜದಲ್ಲಿ ಮತ್ತು ತೋಳಿನಲ್ಲಿ ಕಪ್ಪುಪಟ್ಟಿ ಕಟ್ಟಿಕೊಂಡಿದ್ದರು.</p>.<p>*<br />ನಾನು ನಾಲ್ಕು ಸಲ ಶಾಸಕನಾಗಿದ್ದೇನೆ. ನನ್ನದೇ ದಾಖಲೆ ಹೊಂದಿಸಲು ನಾಲ್ಕು ತಿಂಗಳು ಬೇಕಾಯಿತು. ಇನ್ನು ಸಾಮಾನ್ಯ ಜನ ಹೇಗೆ ಜೋಡಿಸಬೇಕು?<br /><em><strong>-ಜಮೀರ್ ಅಹಮದ್, ಕಾಂಗ್ರೆಸ್ ಶಾಸಕ</strong> </em></p>.<figcaption><strong>ಟೌನ್ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಿತ್ತಿಪತ್ರ ಹಿಡಿದ ಯುವತಿ</strong></figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು</strong>: ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹಾಗೂ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರೋಧಿಸಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.</p>.<p>ಆಲ್ ಮಜೀದ್ ಸಮಿತಿ ನೇತೃತ್ವದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಏರ್ಪಡಿಸಿದ್ದ ‘ಭಾರತ ಉಳಿಸಿ, ಸಂವಿಧಾನ ರಕ್ಷಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾವಿರಾರು ಜನರು, ಸಿಎಆರ್, ಎನ್ಆರ್ಸಿ, ಎನ್ಪಿಆರ್ ವಿರುದ್ಧದ ಘೋಷಣೆಗಳನ್ನು ಕೂಗಿದರು.</p>.<p>‘ದೇಶದ ಜಾತ್ಯತೀತ ಮೌಲ್ಯಗಳನ್ನು ಬುಡಮೇಲು ಮಾಡುವ ಕುತಂತ್ರದಿಂದ ಕೇಂದ್ರ ಸರ್ಕಾರ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೆ ತಂದಿರುವುದು ಸ್ಪಷ್ಟವಾಗುತ್ತದೆ.ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದ ಮುಸ್ಲಿಮೇತರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇವುಗಳನ್ನು ತರಲಾಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ನಮ್ಮದು ರಾಜ್ಯಾಂಗ ಆಧಾರದ ಮೇಲೆ ರಚಿಸಿದ ದೇಶವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲ ಜಾತಿ, ವರ್ಗದ ಜನ ಪ್ರಾಣ ಕೊಟ್ಟಿದ್ದಾರೆ. ಪೌರತ್ವ ನೋಂದಣಿಯ ನೆಪದಲ್ಲಿ ಸಮಾಜವನ್ನು ಒಡೆಯುವುದು ಬೇಡ’ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಆಗ್ರಹಿಸಿದರು.</p>.<p>‘ಸಿಎಎ ಮತ್ತು ಎನ್ಆರ್ಸಿಯಿಂದ ತೊಂದರೆ ಇಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ತಾಯಿಯ ಬಳಿ ಪೌರತ್ವ ನೋಂದಣಿಗೆ ಅಗತ್ಯವಿರುವ ದಾಖಲೆ ಇದೆಯೇ ಎಂಬುದನ್ನು ಮೊದಲು ಬಹಿರಂಗಪಡಿಸಲಿ’ ಎಂದು ಶಾಸಕ ಜಮೀರ್ ಅಹಮದ್ ಖಾನ್ ಸವಾಲು ಹಾಕಿದರು.</p>.<p>ಪಾಕಿಸ್ತಾನದಲ್ಲಿ ನೂರು ವರ್ಷ ಜೀವಿಸುವ ಬದಲು, ಜಾತ್ಯತೀತವಾದ ಭಾರತದಲ್ಲಿ ಒಂದು ದಿನ ಜೀವಿಸಿದರೆ ಸಾಕು ಎನ್ನುವ ಭಾವನೆ ನಮ್ಮಲಿದೆ. ಆದರೆ, ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಈ ಭಾವನೆಗಳಿಗೆ ಹುಳಿ ಹಿಂಡುತ್ತಿದ್ದಾರೆ’ ಎಂದು ಗೋರಿಪಾಳ್ಯದ ಫಾರೂಖಿಯಾ ಮಸೀದಿಯ ಮೌಲಾನಪಿ.ಎಂ.ಮುಜಮಿಲ್ ನುಡಿದರು.</p>.<p>ಪ್ರತಿಭಟನೆ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳಿಲ್ಲದೆ ಸಭೆ ಶಾಂತಿಯುತವಾಗಿ ಮುಕ್ತಾಯವಾಯಿತು. ಇದಕ್ಕೂ ಮೊದಲು ಮೆರವಣಿಗೆ ನಡೆಸಲಾಯಿತು.</p>.<p>ಮೈಸೂರು ರಸ್ತೆ ಸೇರಿದಂತೆ ಸಮಾವೇಶ ನಡೆಯುತ್ತಿದ್ದ ಮೈದಾನದ ಸಮೀಪದ ಎಲ್ಲ ರಸ್ತೆಗಳಲ್ಲೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಚಾಲಕರು ಮುಂದೆ ಸಾಗಲು ಹರಸಾಹಸ ಪಡುತ್ತಿದ್ದುದು ಕಂಡುಬಂತು.</p>.<p><strong>ಮೊಳಗಿದ ರಾಷ್ಟ್ರಗೀತೆ...</strong><br />ಸಭೆ ಆರಂಭಿಸುವ ಮೊದಲುಪ್ರತಿಭಟನಾಕಾರರು ರಾಷ್ಟ್ರಗೀತೆ ಹಾಡಿದರು.ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ತ್ರಿವರ್ಣ ಧ್ವಜಗಳು ಹಾರಾಡಿದವು. ಅನೇಕರು ಭುಜದಲ್ಲಿ ಮತ್ತು ತೋಳಿನಲ್ಲಿ ಕಪ್ಪುಪಟ್ಟಿ ಕಟ್ಟಿಕೊಂಡಿದ್ದರು.</p>.<p>*<br />ನಾನು ನಾಲ್ಕು ಸಲ ಶಾಸಕನಾಗಿದ್ದೇನೆ. ನನ್ನದೇ ದಾಖಲೆ ಹೊಂದಿಸಲು ನಾಲ್ಕು ತಿಂಗಳು ಬೇಕಾಯಿತು. ಇನ್ನು ಸಾಮಾನ್ಯ ಜನ ಹೇಗೆ ಜೋಡಿಸಬೇಕು?<br /><em><strong>-ಜಮೀರ್ ಅಹಮದ್, ಕಾಂಗ್ರೆಸ್ ಶಾಸಕ</strong> </em></p>.<figcaption><strong>ಟೌನ್ಹಾಲ್ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಿತ್ತಿಪತ್ರ ಹಿಡಿದ ಯುವತಿ</strong></figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>