<p><strong>ಬೆಂಗಳೂರು</strong>: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ (ಜೆಎನ್ಸಿಎಎಸ್ಆರ್) ಆವರಣದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ವಿಜ್ಞಾನಿಗಳು ಮತ್ತು ಅಧ್ಯಾಪಕರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ದೇಶದ ಹಲವು ಕಡೆಗಳಲ್ಲಿ ಪ್ರತಿಭಟನನಿರತ ವಿದ್ಯಾರ್ಥಿಗಳ ಮೇಲೆಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನೀಯ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಎರಡೂ ಅಪಾಯಕಾರಿ. ಇದರಿಂದ ಮುಂದಿನ ದಿನಗಳಲ್ಲಿ ದೇಶವು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು’ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.</p>.<p>‘ಧರ್ಮದ ಆಧಾರದಲ್ಲಿ ನಾಗರಿಕರನ್ನು ವಿಭಜಿಸುವುದು ಆತಂಕಕಾರಿ ಬೆಳವಣಿಗೆ. ಇದರಿಂದ ದೇಶದ ಜಾತ್ಯತೀತ ಮತ್ತು ಪ್ರಜಾತಂತ್ರದ ಬಂಧವೇ ಸಡಿಲವಾಗುತ್ತದೆ. ಈ ಬೆಳವಣಿಗೆಯಿಂದ ತುಂಬಾ ನಮಗೆ ನೋವಾಗಿದೆ. ಧರ್ಮದ ಆಧಾರದ ಮೇಲೆ ಧ್ರುವೀಕರಣ ಮಾಡುವುದನ್ನು ಖಂಡಿಸುತ್ತೇವೆ’ ಎಂದು ತಿಳಿಸಿದ್ದಾರೆ.</p>.<p>‘ಪ್ರಜಾತಂತ್ರ ಆರೋಗ್ಯವಾಗಿ ಇರಬೇಕಾದರೆ, ರಾಜಕೀಯ ಸಂವಾದ ಮತ್ತು ಚರ್ಚೆ ಅತಿ ಮುಖ್ಯ. ಮುಕ್ತ ಚಿಂತನೆ, ಸಂವಾದ ಮತ್ತು ಸ್ವತಂತ್ರ ಅನ್ವೇಷಣೆ ನಡೆಸಲು ಇರುವ ಏಕೈಕ ಸ್ಥಳವೆಂದರೆ ವಿಶ್ವವಿದ್ಯಾಲಯಗಳು. ಈ ಮೂಲಕ ಮುಂದಿನ ತಲೆಮಾರಿನ ಜನಾಂಗವನ್ನು ರೂಪುಗೊಳ್ಳುತ್ತದೆ. ಆದರೆ, ಸರ್ಕಾರಕ್ಕೆ ಈ ವಿಷಯದಲ್ಲಿ ಗೌರವ ಇಲ್ಲ ಎಂಬುದು ಆತಂಕಕಾರಿ ಸಂಗತಿ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ (ಜೆಎನ್ಸಿಎಎಸ್ಆರ್) ಆವರಣದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ವಿಜ್ಞಾನಿಗಳು ಮತ್ತು ಅಧ್ಯಾಪಕರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ದೇಶದ ಹಲವು ಕಡೆಗಳಲ್ಲಿ ಪ್ರತಿಭಟನನಿರತ ವಿದ್ಯಾರ್ಥಿಗಳ ಮೇಲೆಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನೀಯ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಎರಡೂ ಅಪಾಯಕಾರಿ. ಇದರಿಂದ ಮುಂದಿನ ದಿನಗಳಲ್ಲಿ ದೇಶವು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು’ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.</p>.<p>‘ಧರ್ಮದ ಆಧಾರದಲ್ಲಿ ನಾಗರಿಕರನ್ನು ವಿಭಜಿಸುವುದು ಆತಂಕಕಾರಿ ಬೆಳವಣಿಗೆ. ಇದರಿಂದ ದೇಶದ ಜಾತ್ಯತೀತ ಮತ್ತು ಪ್ರಜಾತಂತ್ರದ ಬಂಧವೇ ಸಡಿಲವಾಗುತ್ತದೆ. ಈ ಬೆಳವಣಿಗೆಯಿಂದ ತುಂಬಾ ನಮಗೆ ನೋವಾಗಿದೆ. ಧರ್ಮದ ಆಧಾರದ ಮೇಲೆ ಧ್ರುವೀಕರಣ ಮಾಡುವುದನ್ನು ಖಂಡಿಸುತ್ತೇವೆ’ ಎಂದು ತಿಳಿಸಿದ್ದಾರೆ.</p>.<p>‘ಪ್ರಜಾತಂತ್ರ ಆರೋಗ್ಯವಾಗಿ ಇರಬೇಕಾದರೆ, ರಾಜಕೀಯ ಸಂವಾದ ಮತ್ತು ಚರ್ಚೆ ಅತಿ ಮುಖ್ಯ. ಮುಕ್ತ ಚಿಂತನೆ, ಸಂವಾದ ಮತ್ತು ಸ್ವತಂತ್ರ ಅನ್ವೇಷಣೆ ನಡೆಸಲು ಇರುವ ಏಕೈಕ ಸ್ಥಳವೆಂದರೆ ವಿಶ್ವವಿದ್ಯಾಲಯಗಳು. ಈ ಮೂಲಕ ಮುಂದಿನ ತಲೆಮಾರಿನ ಜನಾಂಗವನ್ನು ರೂಪುಗೊಳ್ಳುತ್ತದೆ. ಆದರೆ, ಸರ್ಕಾರಕ್ಕೆ ಈ ವಿಷಯದಲ್ಲಿ ಗೌರವ ಇಲ್ಲ ಎಂಬುದು ಆತಂಕಕಾರಿ ಸಂಗತಿ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>