<p><strong>ನೆಲಮಂಗಲ:</strong> ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಎಪಿಎಂಸಿ ತರಕಾರಿ ಮಾರುಕಟ್ಟೆಯ ದುರ್ವಾಸನೆಯಿಂದಾಗಿ ಸ್ಥಳೀಯರು ವಾಸಮಾಡಲು ಆಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಹುಸ್ಕೂರು ರಸ್ತೆಯಿಂದ ದಾಸನಪುರ ಎಪಿಎಂಸಿ ಮಾರುಕಟ್ಟೆಗೆ ಹೋಗುವ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವ ತನಕ ರಸ್ತೆ ತೆರವು ಮಾಡುವುದಿಲ್ಲ ಎಂದು ಪಟ್ಟುಹಿಡಿದರು. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರಿಗೆ ಪ್ರತಿಭಟನಾಕಾರರು ರಸ್ತೆ ಪಕ್ಕದಲ್ಲಿರುವ ಕಸದ ಸಮಸ್ಯೆ, ಶೌಚಾಲಯಗಳ ದುಸ್ಥಿತಿ, ಟ್ರಾಫಿಕ್ ಸಮಸ್ಯೆ, ಕಸದಿಂದ ಜನರಿಗೆ ಆಗುತ್ತಿರುವ ಸಮಸ್ಯೆಗಳ ವಿವರಿಸಿದರು. ಜೊತೆಗೆ ಸ್ಥಳಕ್ಕೆ ಕರೆದುಕೊಂಡು ಹೋಗಿ ಪರಿಸ್ಥಿತಿಯನ್ನು ಮನವರಿಕೆ ಮಾಡಿದರು. </p>.<p>ಎಪಿಎಂಸಿಯವರು ಗ್ರಾಮ ಪಂಚಾಯಿತಿಗೆ ತೆರಿಗೆ ಕಟ್ಟುವ ವಿಚಾರ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶವನ್ನು ಆಧರಿಸಿ ಮುಂದುವರಿಯಲಾಗುವುದು. ರಸ್ತೆಯಲ್ಲಿ ಸುರಿಯುತ್ತಿರುವ ಕಸ ತೆರವುಗೊಳಿಸಲಾಗುವುದು. ಕಸ ಸುರಿಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ದೊರೆಸ್ವಾಮಿ ಭರವಸೆ ನೀಡಿದರು.</p>.<p>ಹುಸ್ಕೂರು ಗ್ರಾಮಪಂಚಾಯಿತಿ ಅಧ್ಯಕ್ಷ ಡಾ.ಬಿ.ರಮೇಶ್ ‘ಸಮಸ್ಯೆಗಳನ್ನು ಶಾಸಕ ಎಸ್.ಆರ್.ವಿಶ್ವನಾಥ್ ಸಮ್ಮುಖದಲ್ಲಿ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಬಗೆಹರಿಯದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ವರ್ತಕ ಗೋವಿಂದ, ಹುಸ್ಕೂರು ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್, ಮಾದನಾಯಕನಹಳ್ಳಿ ಇನ್ಸ್ಪೆಕ್ಟರ್ ಮುರುಳಿಧರ್, ಸಬ್ಇನ್ಸ್ಪೆಕ್ಟರ್ ಜಯಂತಿ, ಎಂಪಿಎಂಸಿ ಅಧಿಕಾರಿ ಸುಮಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಎಪಿಎಂಸಿ ತರಕಾರಿ ಮಾರುಕಟ್ಟೆಯ ದುರ್ವಾಸನೆಯಿಂದಾಗಿ ಸ್ಥಳೀಯರು ವಾಸಮಾಡಲು ಆಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ಹುಸ್ಕೂರು ರಸ್ತೆಯಿಂದ ದಾಸನಪುರ ಎಪಿಎಂಸಿ ಮಾರುಕಟ್ಟೆಗೆ ಹೋಗುವ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವ ತನಕ ರಸ್ತೆ ತೆರವು ಮಾಡುವುದಿಲ್ಲ ಎಂದು ಪಟ್ಟುಹಿಡಿದರು. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರಿಗೆ ಪ್ರತಿಭಟನಾಕಾರರು ರಸ್ತೆ ಪಕ್ಕದಲ್ಲಿರುವ ಕಸದ ಸಮಸ್ಯೆ, ಶೌಚಾಲಯಗಳ ದುಸ್ಥಿತಿ, ಟ್ರಾಫಿಕ್ ಸಮಸ್ಯೆ, ಕಸದಿಂದ ಜನರಿಗೆ ಆಗುತ್ತಿರುವ ಸಮಸ್ಯೆಗಳ ವಿವರಿಸಿದರು. ಜೊತೆಗೆ ಸ್ಥಳಕ್ಕೆ ಕರೆದುಕೊಂಡು ಹೋಗಿ ಪರಿಸ್ಥಿತಿಯನ್ನು ಮನವರಿಕೆ ಮಾಡಿದರು. </p>.<p>ಎಪಿಎಂಸಿಯವರು ಗ್ರಾಮ ಪಂಚಾಯಿತಿಗೆ ತೆರಿಗೆ ಕಟ್ಟುವ ವಿಚಾರ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶವನ್ನು ಆಧರಿಸಿ ಮುಂದುವರಿಯಲಾಗುವುದು. ರಸ್ತೆಯಲ್ಲಿ ಸುರಿಯುತ್ತಿರುವ ಕಸ ತೆರವುಗೊಳಿಸಲಾಗುವುದು. ಕಸ ಸುರಿಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ದೊರೆಸ್ವಾಮಿ ಭರವಸೆ ನೀಡಿದರು.</p>.<p>ಹುಸ್ಕೂರು ಗ್ರಾಮಪಂಚಾಯಿತಿ ಅಧ್ಯಕ್ಷ ಡಾ.ಬಿ.ರಮೇಶ್ ‘ಸಮಸ್ಯೆಗಳನ್ನು ಶಾಸಕ ಎಸ್.ಆರ್.ವಿಶ್ವನಾಥ್ ಸಮ್ಮುಖದಲ್ಲಿ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಬಗೆಹರಿಯದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ವರ್ತಕ ಗೋವಿಂದ, ಹುಸ್ಕೂರು ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್, ಮಾದನಾಯಕನಹಳ್ಳಿ ಇನ್ಸ್ಪೆಕ್ಟರ್ ಮುರುಳಿಧರ್, ಸಬ್ಇನ್ಸ್ಪೆಕ್ಟರ್ ಜಯಂತಿ, ಎಂಪಿಎಂಸಿ ಅಧಿಕಾರಿ ಸುಮಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>