ಬೆಂಗಳೂರು: ‘ಶ್ರೀ ಗುರುರಾಘವೇಂದ್ರ ಕೋ–ಆಪರೇಟಿವ್ ಹಾಗೂ ವಸಿಷ್ಠ ಸೌಹಾರ್ದ ಸಹಕಾರಿ ಬ್ಯಾಂಕ್ಗಳಲ್ಲಿ ನಡೆದಿರುವ ಅವ್ಯವಹಾರದ ತನಿಖೆಯನ್ನು 15ರಿಂದ 20 ದಿನಗಳ ಒಳಗೆ ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೆ ಸಂಸದ ತೇಜಸ್ವಿ ಸೂರ್ಯ ಹಾಗೂ ಬಸವನಗುಡಿ ಶಾಸಕ ಎಲ್.ರವಿಸುಬ್ರಹ್ಮಣ್ಯ ಅವರ ಮನೆ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ’ ಎಂದು ಠೇವಣಿದಾರರು ಎಚ್ಚರಿಸಿದ್ದಾರೆ.