‘ಪ್ರತಿವರ್ಷ ಸೆಪ್ಟೆಂಬರ್ 14ರಂದು ಕೇಂದ್ರ ಸರ್ಕಾರ ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ ಆಚರಣೆ ಮಾಡುತ್ತಿದೆ. ಹಿಂದಿ ಭಾಷೆಗೆ ಮಾತ್ರ ಬೇರೆ ಭಾಷೆಗಳಿಗಿಂತ ಮೇಲಿನ ಸ್ಥಾನ ನೀಡಿರುವುದು ತಾರತಮ್ಯ ನೀತಿ. ಸಾಂವಿಧಾನಿಕ ಸಂಸ್ಥೆಗಳ ಮೂಲಕವೇ ಎಲ್ಲಾ ಹಿಂದಿಯೇತರರ ಮೇಲೆ ಹಿಂದಿ ಹೇರಿಕೆ ಮಾಡುತ್ತಿದ್ದು, ಇದು ತಕ್ಷಣದಿಂದಲೇ ನಿಲ್ಲಬೇಕು’ ಎಂದು ನಾರಾಯಣಗೌಡ ಒತ್ತಾಯಿಸಿದರು.