<p><strong>ಬೆಂಗಳೂರು</strong>: ‘ದಲಿತ, ಶೋಷಿತ, ಹಿಂದುಳಿದ ಸಮುದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರುವ ಶಾಸಕ ಮುನಿರತ್ನರನ್ನು ಸಾರ್ವಜನಿಕ ಜೀವನದಲ್ಲಿ ಮುಂದುವರಿ ಯಲು ಶೋಷಿತ ಸಮಾಜ ಯಾವುದೇ ಕಾರಣಕ್ಕೂ ಬಿಡು ವುದಿಲ್ಲ. ಜೈಲಿಗೆ ಹೋಗುವವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಿದೆ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸುಧಾಮ್ ದಾಸ್ ಹೇಳಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುನಿರತ್ನ ವಿರುದ್ಧ ವಿಶೇಷ ಸರ್ಕಾರಿ ವಕೀಲರನ್ನು ನೇಮಿಸಿ, ಕಠಿಣ ಶಿಕ್ಷೆಯಾಗುವಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.</p><p>‘ಜನಪ್ರತಿನಿಧಿಯೊಬ್ಬ ಹೀಗೆ ಮಾತನಾಡುತ್ತಾನೆ ಎನ್ನುವುದು ಅಸಹ್ಯದ ಪರಮಾವಧಿ. ಹೊರ ರಾಜ್ಯದಿಂದ ಬಂದ ಈತ ಕೊಲೆ, ಸುಲಿಗೆ ಸೇರಿದಂತೆ ಅಪರಾಧ ಪ್ರಕರಣಗಳಲ್ಲೇ ಮುಳುಗಿರುವ ವ್ಯಕ್ತಿ’ ಎಂದರು.</p><p>ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ‘ಮುನಿರತ್ನ ಅತ್ಯಂತ ತುಚ್ಛವಾಗಿ ಎರಡು ಸಮುದಾಯಗಳ ಬಗ್ಗೆ ಮಾತನಾಡಿದ್ದಾನೆ. ಈತನ ವಿರುದ್ಧ ರಾಜ್ಯದ ಅನೇಕ ಕಡೆ ದಲಿತ ಸಮುದಾಯದವರು ಸಾಂಕೇತಿಕ ದೂರು ನೀಡಿದ್ದಾರೆ’ ಎಂದರು.</p><p>ಬಿ.ಗೋಪಾಲ್ ಮಾತನಾಡಿ, ‘ಮನುವಾದವನ್ನು ಪ್ರತಿನಿಧಿಸುವ ಬಿಜೆಪಿಯ ಆಂತರಿಕ ಮಾತುಗಳನ್ನೇ ಮುನಿರತ್ನ ಆಡಿದ್ದಾರೆ. ನಾಡಪ್ರಭು ಕೆಂಪೇಗೌಡರ ಸಮುದಾಯದ ಬಗ್ಗೆ, ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿದ್ದಾರೆ. ನಾವು ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದಲಿತ, ಶೋಷಿತ, ಹಿಂದುಳಿದ ಸಮುದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರುವ ಶಾಸಕ ಮುನಿರತ್ನರನ್ನು ಸಾರ್ವಜನಿಕ ಜೀವನದಲ್ಲಿ ಮುಂದುವರಿ ಯಲು ಶೋಷಿತ ಸಮಾಜ ಯಾವುದೇ ಕಾರಣಕ್ಕೂ ಬಿಡು ವುದಿಲ್ಲ. ಜೈಲಿಗೆ ಹೋಗುವವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಿದೆ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸುಧಾಮ್ ದಾಸ್ ಹೇಳಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುನಿರತ್ನ ವಿರುದ್ಧ ವಿಶೇಷ ಸರ್ಕಾರಿ ವಕೀಲರನ್ನು ನೇಮಿಸಿ, ಕಠಿಣ ಶಿಕ್ಷೆಯಾಗುವಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.</p><p>‘ಜನಪ್ರತಿನಿಧಿಯೊಬ್ಬ ಹೀಗೆ ಮಾತನಾಡುತ್ತಾನೆ ಎನ್ನುವುದು ಅಸಹ್ಯದ ಪರಮಾವಧಿ. ಹೊರ ರಾಜ್ಯದಿಂದ ಬಂದ ಈತ ಕೊಲೆ, ಸುಲಿಗೆ ಸೇರಿದಂತೆ ಅಪರಾಧ ಪ್ರಕರಣಗಳಲ್ಲೇ ಮುಳುಗಿರುವ ವ್ಯಕ್ತಿ’ ಎಂದರು.</p><p>ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ‘ಮುನಿರತ್ನ ಅತ್ಯಂತ ತುಚ್ಛವಾಗಿ ಎರಡು ಸಮುದಾಯಗಳ ಬಗ್ಗೆ ಮಾತನಾಡಿದ್ದಾನೆ. ಈತನ ವಿರುದ್ಧ ರಾಜ್ಯದ ಅನೇಕ ಕಡೆ ದಲಿತ ಸಮುದಾಯದವರು ಸಾಂಕೇತಿಕ ದೂರು ನೀಡಿದ್ದಾರೆ’ ಎಂದರು.</p><p>ಬಿ.ಗೋಪಾಲ್ ಮಾತನಾಡಿ, ‘ಮನುವಾದವನ್ನು ಪ್ರತಿನಿಧಿಸುವ ಬಿಜೆಪಿಯ ಆಂತರಿಕ ಮಾತುಗಳನ್ನೇ ಮುನಿರತ್ನ ಆಡಿದ್ದಾರೆ. ನಾಡಪ್ರಭು ಕೆಂಪೇಗೌಡರ ಸಮುದಾಯದ ಬಗ್ಗೆ, ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿದ್ದಾರೆ. ನಾವು ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>