<p><strong>ಬೆಂಗಳೂರು:</strong> ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ (ಕಮ್ಯುನಿಸ್ಟ್) ನಗರ ಜಿಲ್ಲಾ ಸಮಿತಿ ಸದಸ್ಯರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎಂ.ಎನ್.ಶ್ರೀರಾಮ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ರೈಲ್ವೆ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.</p>.<p>ಬಳಿಕ ಮಾತನಾಡಿದ ಅವರು,'ಭಾರತೀಯ ರೈಲ್ವೆ ಎರಡು ಕೋಟಿಗಿಂತಲೂ ಹೆಚ್ಚಿನ ಜನರ ಜೀವನಾಡಿ. ರೈಲ್ವೆ ಯಾವುದೇ ನಷ್ಟಕ್ಕೆ ತುತ್ತಾಗಿಲ್ಲ. 2018ರಲ್ಲಿ ₹1,665 ಕೋಟಿ ಹಾಗೂ 2019ರಲ್ಲಿ ₹3,774 ಕೋಟಿ ನಿವ್ವಳ ಲಾಭ ಮಾಡಿದೆ ಎಂದು ಕಳೆದ ವರ್ಷ ಆರ್ಥಿಕ ಸಚಿವರೇ ಹೇಳಿದ್ದರು. ಹೀಗಿರುವಾಗ ಖಾಸಗಿಯವರಿಗೆ ನೀಡುವುದು ಅರ್ಥಹೀನ' ಎಂದು ದೂರಿದರು.</p>.<p>'ಸಾರ್ವಜನಿಕ ವಲಯದ ರೈಲ್ವೆಯನ್ನು ಖಾಸಗಿಯವರಿಗೆ ನೀಡುವುದರಿಂದ ಕೆಲವೇ ಮಂದಿ ಬಂಡವಾಳಗಾರರಿಗೆ ಅನುಕೂಲವಾದರೆ, 12 ಲಕ್ಷ ಕಾಯಂ ಉದ್ಯೋಗಿಗಳು, ಲಕ್ಷಾಂತರ ಗುತ್ತಿಗೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ರೈಲ್ವೆ ಪ್ರಯಾಣ ದುಬಾರಿಯಾಗಲಿದ್ದು, ಪ್ರಯಾಣಿಕರಿಗೂ ಹೊಡೆತ ಬೀಳಲಿದೆ. ಈ ಜನವಿರೋಧಿ ನಿರ್ಧಾರವನ್ನು ಕೈಬಿಡದಿದ್ದರೆ, ಪ್ರತಿಭಟನೆ ಮುಂದುವರಿಸಲಾಗುವುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾದ (ಕಮ್ಯುನಿಸ್ಟ್) ನಗರ ಜಿಲ್ಲಾ ಸಮಿತಿ ಸದಸ್ಯರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎಂ.ಎನ್.ಶ್ರೀರಾಮ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ರೈಲ್ವೆ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.</p>.<p>ಬಳಿಕ ಮಾತನಾಡಿದ ಅವರು,'ಭಾರತೀಯ ರೈಲ್ವೆ ಎರಡು ಕೋಟಿಗಿಂತಲೂ ಹೆಚ್ಚಿನ ಜನರ ಜೀವನಾಡಿ. ರೈಲ್ವೆ ಯಾವುದೇ ನಷ್ಟಕ್ಕೆ ತುತ್ತಾಗಿಲ್ಲ. 2018ರಲ್ಲಿ ₹1,665 ಕೋಟಿ ಹಾಗೂ 2019ರಲ್ಲಿ ₹3,774 ಕೋಟಿ ನಿವ್ವಳ ಲಾಭ ಮಾಡಿದೆ ಎಂದು ಕಳೆದ ವರ್ಷ ಆರ್ಥಿಕ ಸಚಿವರೇ ಹೇಳಿದ್ದರು. ಹೀಗಿರುವಾಗ ಖಾಸಗಿಯವರಿಗೆ ನೀಡುವುದು ಅರ್ಥಹೀನ' ಎಂದು ದೂರಿದರು.</p>.<p>'ಸಾರ್ವಜನಿಕ ವಲಯದ ರೈಲ್ವೆಯನ್ನು ಖಾಸಗಿಯವರಿಗೆ ನೀಡುವುದರಿಂದ ಕೆಲವೇ ಮಂದಿ ಬಂಡವಾಳಗಾರರಿಗೆ ಅನುಕೂಲವಾದರೆ, 12 ಲಕ್ಷ ಕಾಯಂ ಉದ್ಯೋಗಿಗಳು, ಲಕ್ಷಾಂತರ ಗುತ್ತಿಗೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ರೈಲ್ವೆ ಪ್ರಯಾಣ ದುಬಾರಿಯಾಗಲಿದ್ದು, ಪ್ರಯಾಣಿಕರಿಗೂ ಹೊಡೆತ ಬೀಳಲಿದೆ. ಈ ಜನವಿರೋಧಿ ನಿರ್ಧಾರವನ್ನು ಕೈಬಿಡದಿದ್ದರೆ, ಪ್ರತಿಭಟನೆ ಮುಂದುವರಿಸಲಾಗುವುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>