<p><strong>ಬೆಂಗಳೂರು:</strong> ಬಾಲಿವುಡ್ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡ ಸಂಘಟನೆ ಮುಖಂಡ ರೂಪೇಶ್ ರಾಜಣ್ಣ ಹಾಗೂ ಇತರೆ ಕಾರ್ಯಕರ್ತರು ಶನಿವಾರ ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದರು.</p>.<p>ಬಳಿಕ ವಾಣಿಜ್ಯ ಮಂಡಳಿಯ ಮುಖ್ಯಸ್ಥರನ್ನು ಭೇಟಿಯಾದ ಕಾರ್ಯಕರ್ತರು, ಸೋನು ನಿಗಮ್ ಅವರನ್ನು ಸ್ಯಾಂಡಲ್ವುಡ್ನಿಂದ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಜತೆಗೆ ಈ ಹಿಂದೆ ಉತ್ತರ ಭಾರತ ಸೋನು ನಿಗಮ್ ಅವರನ್ನು ನಿರ್ಲಕ್ಷ್ಯ ಮಾಡಿದಾಗ, ಕನ್ನಡಿಗರು ಪ್ರೀತಿ ಕೊಟ್ಟಿದ್ದಾರೆ. ಆದರೂ ಕನ್ನಡಿಗರನ್ನು ಭಯೋತ್ಫಾದಕರಿಗೆ ಹೊಲಿಕೆ ಮಾಡಿರುವುದು ಸರಿಯಲ್ಲ. ಆದ್ದರಿಂದ ಅವರನ್ನು ಕನ್ನಡ ಸಿನಿಮಾಗಳಿಂದ ನಿಷೇಧಿಸಬೇಕು ಎಂದು ಒತ್ತಾಯಿಸಿದರು.</p>.<p>ಸೋನು ನಿಗಮ್ ಅವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜಾಜಿನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯ ಮುಂಭಾಗ ಸೋನು ನಿಗಮ್ ವಿರುದ್ಧ ಪ್ರತಿಭಟನೆ ನಡೆಸಿದರು. ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್, ರಘು ಜಾಣಗೆರೆ, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ರಘು ನಂದನ್, ಎಲ್.ಜೀವನ್ ಹಾಗೂ ಇತರರು ಇದ್ದರು.</p>.ಕನ್ನಡಾಭಿಮಾನಕ್ಕೆ ಪಹಲ್ಗಾಮ್ ಘಟನೆ ಹೋಲಿಕೆ ಪ್ರಕರಣ: ಸೋನು ನಿಗಮ್ ವಿರುದ್ಧ FIR.ಕನ್ನಡ ಹಾಡಿಗೆ ಒತ್ತಾಯ; ಪಹಲ್ಗಾಮ್ ದಾಳಿಗೆ ತಳಕು- ಸೋನು ನಿಗಮ್ ವಿರುದ್ಧ ಆಕ್ರೋಶ.ಕನ್ನಡಕ್ಕೂ ಪಹಲ್ಗಾಮ್ ದಾಳಿಗೂ ಸಂಬಂಧ: ಸೋನು ನಿಗಮ್ ವಿರುದ್ಧ ದೂರು.ಸೇನೆಗೆ ಮಾಹಿತಿ ನೀಡದೆ ಪಾಕ್ ಯುವತಿ ವರಿಸಿದ್ದ CRPF ಯೋಧ ಸೇವೆಯಿಂದ ವಜಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಲಿವುಡ್ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡ ಸಂಘಟನೆ ಮುಖಂಡ ರೂಪೇಶ್ ರಾಜಣ್ಣ ಹಾಗೂ ಇತರೆ ಕಾರ್ಯಕರ್ತರು ಶನಿವಾರ ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದರು.</p>.<p>ಬಳಿಕ ವಾಣಿಜ್ಯ ಮಂಡಳಿಯ ಮುಖ್ಯಸ್ಥರನ್ನು ಭೇಟಿಯಾದ ಕಾರ್ಯಕರ್ತರು, ಸೋನು ನಿಗಮ್ ಅವರನ್ನು ಸ್ಯಾಂಡಲ್ವುಡ್ನಿಂದ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಜತೆಗೆ ಈ ಹಿಂದೆ ಉತ್ತರ ಭಾರತ ಸೋನು ನಿಗಮ್ ಅವರನ್ನು ನಿರ್ಲಕ್ಷ್ಯ ಮಾಡಿದಾಗ, ಕನ್ನಡಿಗರು ಪ್ರೀತಿ ಕೊಟ್ಟಿದ್ದಾರೆ. ಆದರೂ ಕನ್ನಡಿಗರನ್ನು ಭಯೋತ್ಫಾದಕರಿಗೆ ಹೊಲಿಕೆ ಮಾಡಿರುವುದು ಸರಿಯಲ್ಲ. ಆದ್ದರಿಂದ ಅವರನ್ನು ಕನ್ನಡ ಸಿನಿಮಾಗಳಿಂದ ನಿಷೇಧಿಸಬೇಕು ಎಂದು ಒತ್ತಾಯಿಸಿದರು.</p>.<p>ಸೋನು ನಿಗಮ್ ಅವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜಾಜಿನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯ ಮುಂಭಾಗ ಸೋನು ನಿಗಮ್ ವಿರುದ್ಧ ಪ್ರತಿಭಟನೆ ನಡೆಸಿದರು. ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್, ರಘು ಜಾಣಗೆರೆ, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ರಘು ನಂದನ್, ಎಲ್.ಜೀವನ್ ಹಾಗೂ ಇತರರು ಇದ್ದರು.</p>.ಕನ್ನಡಾಭಿಮಾನಕ್ಕೆ ಪಹಲ್ಗಾಮ್ ಘಟನೆ ಹೋಲಿಕೆ ಪ್ರಕರಣ: ಸೋನು ನಿಗಮ್ ವಿರುದ್ಧ FIR.ಕನ್ನಡ ಹಾಡಿಗೆ ಒತ್ತಾಯ; ಪಹಲ್ಗಾಮ್ ದಾಳಿಗೆ ತಳಕು- ಸೋನು ನಿಗಮ್ ವಿರುದ್ಧ ಆಕ್ರೋಶ.ಕನ್ನಡಕ್ಕೂ ಪಹಲ್ಗಾಮ್ ದಾಳಿಗೂ ಸಂಬಂಧ: ಸೋನು ನಿಗಮ್ ವಿರುದ್ಧ ದೂರು.ಸೇನೆಗೆ ಮಾಹಿತಿ ನೀಡದೆ ಪಾಕ್ ಯುವತಿ ವರಿಸಿದ್ದ CRPF ಯೋಧ ಸೇವೆಯಿಂದ ವಜಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>