<p><strong>ಕೆ.ಆರ್.ಪುರ: </strong>‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನ ವಿರೋಧಿ ಯಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿ ಕೆ.ಆರ್.ಪುರದ ಮುಸ್ಲಿಮರು ವಿಜಿನಾ ಪುರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನಕಾರರು ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಎಂ.ಸಯ್ಯದ್ ಅಯೂಬ್ ಮಾತನಾಡಿ, ‘ವಿದೇಶಗಳಿಂದ ಬಂದು ಅಕ್ರಮವಾಗಿ ನೆಲೆಸಿರುವ ಹಿಂದೂ, ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿಗಳಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಮುಸ್ಲಿಮರನ್ನು ಉದ್ದೇಶ ಪೂರ್ವಕವಾಗಿ ಕೈ ಬಿಡಲಾಗಿದೆ. ಧರ್ಮದ ಆಧಾರ ದಲ್ಲಿ ದೇಶವನ್ನು ವಿಭಜಿಸಲು ಮುಂದಾ ಗುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡವಳಿಕೆ ಖಂಡನೀಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ: </strong>‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನ ವಿರೋಧಿ ಯಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿ ಕೆ.ಆರ್.ಪುರದ ಮುಸ್ಲಿಮರು ವಿಜಿನಾ ಪುರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನಕಾರರು ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಎಂ.ಸಯ್ಯದ್ ಅಯೂಬ್ ಮಾತನಾಡಿ, ‘ವಿದೇಶಗಳಿಂದ ಬಂದು ಅಕ್ರಮವಾಗಿ ನೆಲೆಸಿರುವ ಹಿಂದೂ, ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿಗಳಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಮುಸ್ಲಿಮರನ್ನು ಉದ್ದೇಶ ಪೂರ್ವಕವಾಗಿ ಕೈ ಬಿಡಲಾಗಿದೆ. ಧರ್ಮದ ಆಧಾರ ದಲ್ಲಿ ದೇಶವನ್ನು ವಿಭಜಿಸಲು ಮುಂದಾ ಗುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡವಳಿಕೆ ಖಂಡನೀಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>