ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಎಂ.ಸಯ್ಯದ್ ಅಯೂಬ್ ಮಾತನಾಡಿ, ‘ವಿದೇಶಗಳಿಂದ ಬಂದು ಅಕ್ರಮವಾಗಿ ನೆಲೆಸಿರುವ ಹಿಂದೂ, ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿಗಳಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಮುಸ್ಲಿಮರನ್ನು ಉದ್ದೇಶ ಪೂರ್ವಕವಾಗಿ ಕೈ ಬಿಡಲಾಗಿದೆ. ಧರ್ಮದ ಆಧಾರ ದಲ್ಲಿ ದೇಶವನ್ನು ವಿಭಜಿಸಲು ಮುಂದಾ ಗುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡವಳಿಕೆ ಖಂಡನೀಯ’ ಎಂದರು.