<p><strong>ಯಲಹಂಕ</strong>: ತೈಲ ಬೆಲೆಏರಿಕೆ ಖಂಡಿಸಿ ಯಲಹಂಕ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮುಖಂಡ ಕೇಶವ ರಾಜಣ್ಣ ನೇತೃತ್ವದಲ್ಲಿ ಎನ್ಇಎಸ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರ ಮಂಜುನಾಥ್ ಅದ್ದೆ, ’ಕೇಂದ್ರದ ಬಿಜೆಪಿ ಸರ್ಕಾರ ಇಡೀ ದೇಶದ ಜನರನ್ನು ತನ್ನ ಸುಳ್ಳುಗಳ ಮೂಲಕ ವಂಚಿಸುತ್ತಿದೆ. 2014 ರಲ್ಲಿ ಪೆಟ್ರೋಲ್ ಬೆಲೆ ₹ 84 ಇದ್ದಾಗ ನರೇಂದ್ರ ಮೋದಿ ಮತ್ತು ಅಮಿತ್ ಶಾ, ಕೆಂಪು ಕೋಟೆಯ ಎದುರು ಸೈಕಲ್ ತುಳಿದು ಪ್ರತಿಭಟನೆ ನಡೆಸಿದ್ದರು. ಆದರೆ, ಇಂದು ಇವರದೇ ನೇತೃತ್ವದ ಸರ್ಕಾರದಲ್ಲಿ ತೈಲದರ ₹ 100ಕ್ಕೆ ಏರಿದೆ. ಇದರಿಂದ ದೇಶದ ಜನರು ಗಂಭೀರ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೂ ಇದರಬಗ್ಗೆ ಒಂದು ಮಾತನ್ನೂ ಆಡದೆ ಮೌನವಹಿಸಿದ್ದಾರೆ‘ ಎಂದು ದೂರಿದರು.</p>.<p>ಕೇಶವರಾಜಣ್ಣ ಮಾತನಾಡಿ, ’ಕೊರೊನಾ ಹೊಡೆತದಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರು ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ತೈಲದರ ಇಳಿಸಿ ದೇಶದ ಆರ್ಥಿಕತೆ<br />ಯನ್ನು ರಕ್ಷಿಸದಿದ್ದರೆ ಮುಂದಿನ ದಿನಗಳಲ್ಲಿ ಜನರೇ ತಕ್ಕಪಾಠ ಕಲಿಸ ಲಿದ್ದಾರೆ‘ ಎಂದು ಎಚ್ಚರಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ವರುಣ್ ಕುಮಾರ್, ದಿಲೀಪ್ ಕುಮಾರ್, ಮಾರುತಿ, ಅಜರ್ ಷರೀಫ್, ರವಿ ಕುಮಾರ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ತೈಲ ಬೆಲೆಏರಿಕೆ ಖಂಡಿಸಿ ಯಲಹಂಕ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮುಖಂಡ ಕೇಶವ ರಾಜಣ್ಣ ನೇತೃತ್ವದಲ್ಲಿ ಎನ್ಇಎಸ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರ ಮಂಜುನಾಥ್ ಅದ್ದೆ, ’ಕೇಂದ್ರದ ಬಿಜೆಪಿ ಸರ್ಕಾರ ಇಡೀ ದೇಶದ ಜನರನ್ನು ತನ್ನ ಸುಳ್ಳುಗಳ ಮೂಲಕ ವಂಚಿಸುತ್ತಿದೆ. 2014 ರಲ್ಲಿ ಪೆಟ್ರೋಲ್ ಬೆಲೆ ₹ 84 ಇದ್ದಾಗ ನರೇಂದ್ರ ಮೋದಿ ಮತ್ತು ಅಮಿತ್ ಶಾ, ಕೆಂಪು ಕೋಟೆಯ ಎದುರು ಸೈಕಲ್ ತುಳಿದು ಪ್ರತಿಭಟನೆ ನಡೆಸಿದ್ದರು. ಆದರೆ, ಇಂದು ಇವರದೇ ನೇತೃತ್ವದ ಸರ್ಕಾರದಲ್ಲಿ ತೈಲದರ ₹ 100ಕ್ಕೆ ಏರಿದೆ. ಇದರಿಂದ ದೇಶದ ಜನರು ಗಂಭೀರ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೂ ಇದರಬಗ್ಗೆ ಒಂದು ಮಾತನ್ನೂ ಆಡದೆ ಮೌನವಹಿಸಿದ್ದಾರೆ‘ ಎಂದು ದೂರಿದರು.</p>.<p>ಕೇಶವರಾಜಣ್ಣ ಮಾತನಾಡಿ, ’ಕೊರೊನಾ ಹೊಡೆತದಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರು ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ತೈಲದರ ಇಳಿಸಿ ದೇಶದ ಆರ್ಥಿಕತೆ<br />ಯನ್ನು ರಕ್ಷಿಸದಿದ್ದರೆ ಮುಂದಿನ ದಿನಗಳಲ್ಲಿ ಜನರೇ ತಕ್ಕಪಾಠ ಕಲಿಸ ಲಿದ್ದಾರೆ‘ ಎಂದು ಎಚ್ಚರಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ವರುಣ್ ಕುಮಾರ್, ದಿಲೀಪ್ ಕುಮಾರ್, ಮಾರುತಿ, ಅಜರ್ ಷರೀಫ್, ರವಿ ಕುಮಾರ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>