ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ವಕೀಲ ವಿಜಯಕುಮಾರ್ ಎ.ಪಾಟೀಲ್, ‘ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ 27 ಎಫ್ಐಆರ್ ದಾಖಲಿಸಲಾಗಿದೆ’ ಎಂದು ವಿವರಿಸಿ, ದಾಖಲೆ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘2021ರಲ್ಲಿ ಅನುಷ್ಠಾನಗೊಳಿಸಿರುವ ಪ್ರತಿಭಟನೆಗಳು, ಪ್ರದರ್ಶನಗಳು ಮತ್ತು ಪ್ರತಿಭಟನಾ ಮೆರವಣಿಗೆಗಳ (ಬೆಂಗಳೂರು ನಗರ) ಪರವಾನಗಿ ಮತ್ತು ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿತು.