ಈ ವೇಳೆ ಮಾತನಾಡಿದ ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಕಡತಮಲೆ ಸತೀಶ್, ‘ಶಿಕ್ಷಣಸಂಸ್ಥೆಯ ಸಮೀಪದಲ್ಲೇ ಬಾರ್ ಸ್ಥಾಪಿಸಿ ರೆಸ್ಟೋರೆಂಟ್ ಕೂಡ ಬುಧವಾರದಿಂದ ಪ್ರಾರಂಭಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ರಸ್ತೆಯ ಪಕ್ಕದಲ್ಲೇ ಮದ್ಯದಂಗಡಿ ಇರುವುದರಿಂದ ವಿದ್ಯಾರ್ಥಿಗಳ ಮೇಲೆ ಮಾನಸಿಕ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಬಾರ್ ಬಂದ್ ಮಾಡಬೇಕು’ ಎಂದು ಒತ್ತಾಯಿಸಿದರು.