<p><strong>ಬೆಂಗಳೂರು</strong>: ‘ಶೌಚಗುಂಡಿ ಸ್ವಚ್ಛತಾ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಇರುವ ಸೌಲಭ್ಯಗಳು ಸಿಗದಿರಲು ಪಾಲಿಕೆಯ ವಿಳಂಬ ಧೋರಣೆಯೇ ಕಾರಣ’ ಎಂದು ಆರೋಪಿಸಿ ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿಶೌಚಗುಂಡಿ ಸ್ವಚ್ಛತಾ ಕಾರ್ಮಿಕರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಎಲ್ಲ ಸೌಲಭ್ಯ ಒದಗಿಸುವುದಾಗಿ ಸುಪ್ರೀಂಕೋರ್ಟ್ ಮುಂದೆಪಾಲಿಕೆ ಒಪ್ಪಿಕೊಂಡಿತ್ತು. ಆದರೆ, ಈವರೆಗೆ ಯಾವುದೇ ಸೌಲಭ್ಯಗಳನ್ನು ನೀಡಿಲ್ಲ. ಫಲಾನುಭವಿಗಳ ಪಟ್ಟಿ ಮತ್ತು ಕಡತಗಳನ್ನು ನವದೆಹಲಿಯ ಎನ್ಎಸ್ಕೆಡಿಸಿ ಕಚೇರಿಗೂ ಕಳುಹಿಸಿಲ್ಲ’ ಎಂದುಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ದಿ ಸಂಘದ ಬೆಂಗಳೂರು ಘಟಕದ ಅಧ್ಯಕ್ಷಜಿ.ಎನ್.ನಾಗೇಂದ್ರ ಆರೋಪಿಸಿದರು.</p>.<p>‘ಸೌಲಭ್ಯಕ್ಕಾಗಿ ಪಾಲಿಕೆ ಅಧಿಕಾರಿಗಳನ್ನು ಕೇಳಿದರೆ, ಕಡತಗಳು ಕಾಣೆಯಾಗಿವೆ. ಮತ್ತೊಮ್ಮೆ ಸಲ್ಲಿಸಿ’ ಎಂದು ಬೇಜವಾಬ್ದಾರಿಯಿಂದ ಉತ್ತರಿಸುತ್ತಾರೆ. ಕೋಟಿಗಟ್ಟಲೆ ಅನುದಾನ ಫಲಾನುಭವಿಗಳ ಕೈಸೇರಬಾರದು ಎಂದು ಅಧಿಕಾರಿಗಳು ಹಾಗೂ ರಾಜಕಾರಣಿಗಳು ಷಡ್ಯಂತ್ರ ನಡೆಸಿದ್ದಾರೆ. ಈ ವಿಳಂಬ ಧೋರಣೆಯಿಂದಾಗಿ ನಗರದ ಸಫಾಯಿ ಕರ್ಮಚಾರಿಗಳು ಈಗಲೂ ಸೌಲಭ್ಯ ವಂಚಿತರಾಗಿ ಉಳಿದಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಪಾಲಿಕೆ ಈ ಕೂಡಲೇ ಸಫಾಯಿ ಕರ್ಮಚಾರಿಗಳಿಗೆ ಅನುದಾನ ಬಿಡುಗಡೆ, ಗುರುತಿನ ಚೀಟಿ ವಿತರಣೆ ಸೇರಿದಂತೆ ಸರ್ಕಾರಗಳಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ನಮ್ಮ ಬೇಡಿಕೆಗಳು ಈಡೇರದಿದ್ದರೆ, ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದೂ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶೌಚಗುಂಡಿ ಸ್ವಚ್ಛತಾ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಇರುವ ಸೌಲಭ್ಯಗಳು ಸಿಗದಿರಲು ಪಾಲಿಕೆಯ ವಿಳಂಬ ಧೋರಣೆಯೇ ಕಾರಣ’ ಎಂದು ಆರೋಪಿಸಿ ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿಶೌಚಗುಂಡಿ ಸ್ವಚ್ಛತಾ ಕಾರ್ಮಿಕರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಎಲ್ಲ ಸೌಲಭ್ಯ ಒದಗಿಸುವುದಾಗಿ ಸುಪ್ರೀಂಕೋರ್ಟ್ ಮುಂದೆಪಾಲಿಕೆ ಒಪ್ಪಿಕೊಂಡಿತ್ತು. ಆದರೆ, ಈವರೆಗೆ ಯಾವುದೇ ಸೌಲಭ್ಯಗಳನ್ನು ನೀಡಿಲ್ಲ. ಫಲಾನುಭವಿಗಳ ಪಟ್ಟಿ ಮತ್ತು ಕಡತಗಳನ್ನು ನವದೆಹಲಿಯ ಎನ್ಎಸ್ಕೆಡಿಸಿ ಕಚೇರಿಗೂ ಕಳುಹಿಸಿಲ್ಲ’ ಎಂದುಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ದಿ ಸಂಘದ ಬೆಂಗಳೂರು ಘಟಕದ ಅಧ್ಯಕ್ಷಜಿ.ಎನ್.ನಾಗೇಂದ್ರ ಆರೋಪಿಸಿದರು.</p>.<p>‘ಸೌಲಭ್ಯಕ್ಕಾಗಿ ಪಾಲಿಕೆ ಅಧಿಕಾರಿಗಳನ್ನು ಕೇಳಿದರೆ, ಕಡತಗಳು ಕಾಣೆಯಾಗಿವೆ. ಮತ್ತೊಮ್ಮೆ ಸಲ್ಲಿಸಿ’ ಎಂದು ಬೇಜವಾಬ್ದಾರಿಯಿಂದ ಉತ್ತರಿಸುತ್ತಾರೆ. ಕೋಟಿಗಟ್ಟಲೆ ಅನುದಾನ ಫಲಾನುಭವಿಗಳ ಕೈಸೇರಬಾರದು ಎಂದು ಅಧಿಕಾರಿಗಳು ಹಾಗೂ ರಾಜಕಾರಣಿಗಳು ಷಡ್ಯಂತ್ರ ನಡೆಸಿದ್ದಾರೆ. ಈ ವಿಳಂಬ ಧೋರಣೆಯಿಂದಾಗಿ ನಗರದ ಸಫಾಯಿ ಕರ್ಮಚಾರಿಗಳು ಈಗಲೂ ಸೌಲಭ್ಯ ವಂಚಿತರಾಗಿ ಉಳಿದಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಪಾಲಿಕೆ ಈ ಕೂಡಲೇ ಸಫಾಯಿ ಕರ್ಮಚಾರಿಗಳಿಗೆ ಅನುದಾನ ಬಿಡುಗಡೆ, ಗುರುತಿನ ಚೀಟಿ ವಿತರಣೆ ಸೇರಿದಂತೆ ಸರ್ಕಾರಗಳಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ನಮ್ಮ ಬೇಡಿಕೆಗಳು ಈಡೇರದಿದ್ದರೆ, ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದೂ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>