ಸ್ಥಳಕ್ಕೆ ಬಂದ ಪೊಲೀಸರು, ‘ವಿಧಾನಸೌಧ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ನಿಷೇಧಾಜ್ಞೆ ಹೊರಡಿಸಿದ್ದಾರೆ. ಪ್ರತಿಭಟನೆ ಮಾಡಿದರೆ ಪ್ರಕರಣ ದಾಖಲಿಸುತ್ತೇವೆ’ ಎಂದು ಎಚ್ಚರಿಸಿದರು. ಅದಕ್ಕೆ ವಿದ್ಯಾರ್ಥಿಗಳು ಒಪ್ಪದಿದ್ದಾಗ ಪೊಲೀಸರು ವಶಕ್ಕೆ ಪಡೆದರು. ಅಂಧ ವಿದ್ಯಾರ್ಥಿಗಳನ್ನು ಎಳೆದು ವ್ಯಾನ್ಗೆ ಹತ್ತಿಸಿದರು.