<p><strong>ಬೆಂಗಳೂರು: </strong>ಅಂಧ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿದ 30ಕ್ಕೂ ಹೆಚ್ಚು ಅಂಧ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದರು. ಅಶೋಕನಗರ ಠಾಣೆಯಲ್ಲಿ ಸಂಜೆವರೆಗೂ ಕೂರಿಸಿ ನಂತರ ಬಿಡುಗಡೆ ಮಾಡಿದರು.</p>.<p>ವಿ.ವಿ.ಟವರ್ನಲ್ಲಿರುವ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರ ಕಚೇರಿ ಎದುರುರಾಷ್ಟ್ರೀಯ ಅಂಧರ ಒಕ್ಕೂಟದ ರಾಜ್ಯ ಯುವ ಸಮಿತಿ ನೇತೃತ್ವದಲ್ಲಿ ಸೇರಿದ್ದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು, ‘ವಿಧಾನಸೌಧ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ನಿಷೇಧಾಜ್ಞೆ ಹೊರಡಿಸಿದ್ದಾರೆ. ಪ್ರತಿಭಟನೆ ಮಾಡಿದರೆ ಪ್ರಕರಣ ದಾಖಲಿಸುತ್ತೇವೆ’ ಎಂದು ಎಚ್ಚರಿಸಿದರು. ಅದಕ್ಕೆ ವಿದ್ಯಾರ್ಥಿಗಳು ಒಪ್ಪದಿದ್ದಾಗ ಪೊಲೀಸರು ವಶಕ್ಕೆ ಪಡೆದರು. ಅಂಧ ವಿದ್ಯಾರ್ಥಿಗಳನ್ನು ಎಳೆದು ವ್ಯಾನ್ಗೆ ಹತ್ತಿಸಿದರು.</p>.<p>ವಶದಲ್ಲಿದ್ದ ವೇಳೆ ಕೆಲ ವಿದ್ಯಾರ್ಥಿಗಳು ಉಪವಾಸ ಮಾಡಿದರು. ಆ ಮೂಲಕ ಪೊಲೀಸರ ಕ್ರಮವನ್ನು ಖಂಡಿಸಿದರು.</p>.<p class="Subhead"><strong>ಎರಡು ಬಾರಿ ಇಲ್ಲದ ನಿಯಮ ಈಗೇಕೆ? :</strong> ‘ಉಚಿತ ಲ್ಯಾಪ್ಟಾಪ್ ನೀಡುವಿಕೆಯಲ್ಲಿ ವಿಳಂಬ ಮಾಡುತ್ತಿರುವುದು ಇದೇ ಮೊದಲಲ್ಲ. ನಮಗೆ ಪ್ರತಿಭಟನೆಯೂ ಹೊಸದಲ್ಲ. ಈ ಹಿಂದೆ ಎರಡು ಬಾರಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ಮಾಡಿ ಅರ್ಹರಿಗೆ ಲ್ಯಾಪ್ಟಾಪ್ ಕೊಡಿಸಿದ್ದೇವೆ’ ಎಂದು ಸಮಿತಿ ಸಂಯೋಜಕ ವೀರೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಂಧ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿದ 30ಕ್ಕೂ ಹೆಚ್ಚು ಅಂಧ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದರು. ಅಶೋಕನಗರ ಠಾಣೆಯಲ್ಲಿ ಸಂಜೆವರೆಗೂ ಕೂರಿಸಿ ನಂತರ ಬಿಡುಗಡೆ ಮಾಡಿದರು.</p>.<p>ವಿ.ವಿ.ಟವರ್ನಲ್ಲಿರುವ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರ ಕಚೇರಿ ಎದುರುರಾಷ್ಟ್ರೀಯ ಅಂಧರ ಒಕ್ಕೂಟದ ರಾಜ್ಯ ಯುವ ಸಮಿತಿ ನೇತೃತ್ವದಲ್ಲಿ ಸೇರಿದ್ದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.</p>.<p>ಸ್ಥಳಕ್ಕೆ ಬಂದ ಪೊಲೀಸರು, ‘ವಿಧಾನಸೌಧ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ನಿಷೇಧಾಜ್ಞೆ ಹೊರಡಿಸಿದ್ದಾರೆ. ಪ್ರತಿಭಟನೆ ಮಾಡಿದರೆ ಪ್ರಕರಣ ದಾಖಲಿಸುತ್ತೇವೆ’ ಎಂದು ಎಚ್ಚರಿಸಿದರು. ಅದಕ್ಕೆ ವಿದ್ಯಾರ್ಥಿಗಳು ಒಪ್ಪದಿದ್ದಾಗ ಪೊಲೀಸರು ವಶಕ್ಕೆ ಪಡೆದರು. ಅಂಧ ವಿದ್ಯಾರ್ಥಿಗಳನ್ನು ಎಳೆದು ವ್ಯಾನ್ಗೆ ಹತ್ತಿಸಿದರು.</p>.<p>ವಶದಲ್ಲಿದ್ದ ವೇಳೆ ಕೆಲ ವಿದ್ಯಾರ್ಥಿಗಳು ಉಪವಾಸ ಮಾಡಿದರು. ಆ ಮೂಲಕ ಪೊಲೀಸರ ಕ್ರಮವನ್ನು ಖಂಡಿಸಿದರು.</p>.<p class="Subhead"><strong>ಎರಡು ಬಾರಿ ಇಲ್ಲದ ನಿಯಮ ಈಗೇಕೆ? :</strong> ‘ಉಚಿತ ಲ್ಯಾಪ್ಟಾಪ್ ನೀಡುವಿಕೆಯಲ್ಲಿ ವಿಳಂಬ ಮಾಡುತ್ತಿರುವುದು ಇದೇ ಮೊದಲಲ್ಲ. ನಮಗೆ ಪ್ರತಿಭಟನೆಯೂ ಹೊಸದಲ್ಲ. ಈ ಹಿಂದೆ ಎರಡು ಬಾರಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ಮಾಡಿ ಅರ್ಹರಿಗೆ ಲ್ಯಾಪ್ಟಾಪ್ ಕೊಡಿಸಿದ್ದೇವೆ’ ಎಂದು ಸಮಿತಿ ಸಂಯೋಜಕ ವೀರೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>