‘ಮಹಾನಗರ ಪಾಲಿಕೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಯ ಕರಡು ಪ್ರಚಾರಗೊಳಿಸಬೇಕು, ಕೆಜಿಐಡಿ ಮತ್ತು ಜಿಪಿಎಫ್ ಅನುಷ್ಠಾನಗೊಳಿಸಬೇಕು, ಸರ್ಕಾರದಿಂದ ಕ್ರೀಡಾಕೂಟ ನಡೆಸಬೇಕು ಎಂಬ ಬೇಡಿಕೆಗಳನ್ನು ನಗರಾಭಿವೃದ್ಧಿ, ಪೌರಾಡಳಿತ ಇಲಾಖೆಯ ಸಚಿವರು, ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ’ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ತಿಳಿಸಿದರು.