‘ಇದುವರೆಗೂ ಇಪಿಎಫ್ಒ ಕಚೇರಿಯಿಂದ ಹೊರಡಿಸಿರುವ ಎಲ್ಲಾ ಸುತ್ತೋಲೆಗಳು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವ್ಯತಿರಿಕ್ತವಾಗಿದ್ದು, ಈ ಸುತ್ತೋಲೆಗಳಿಗೆ ಯಾವುದೇ ಮನ್ನಣೆ ಇಲ್ಲ. ಆರ್ಸಿ ಗುಪ್ತ ಪ್ರಕರಣದ ತೀರ್ಪನ್ನು ಘನ ನ್ಯಾಯಾಲಯವು ಈವರೆವಿಗೂ ತಳ್ಳಿ ಹಾಕಿಲ್ಲ. ರಾಜ್ಯ ಹೈಕೋರ್ಟ್ ಇದೇ ರೀತಿಯ ಒಟ್ಟು 1600 ರಿಟ್ ಅರ್ಜಿಗಳನ್ನು ಇತ್ಯರ್ಥಪಡಿಸಿದ್ದು, ಅವೆಲ್ಲವನ್ನು ಕೂಡಲೇ ಮಾನ್ಯ ಮಾಡಿ, ಕನಿಷ್ಠ ಪಿಂಚಣಿ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಶಂಕರ್ ಕುಮಾರ್, ಕಾರ್ಯಾಧ್ಯಕ್ಷ ನಂಜುಂಡೇಗೌಡ, ಉಪಾಧ್ಯಕ್ಷ ಸುಬ್ಬಣ್ಣ ಆಗ್ರಹಿಸಿದರು.