<p><strong>ಬೆಂಗಳೂರು</strong>: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸದೇ ಬಜೆಟ್ನಲ್ಲಿ ಕೇವಲ ಸೀರೆ ನೀಡುವ ಪ್ರಸ್ತಾವ ಮಾಡಿರುವುದನ್ನು ವಿರೋಧಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಸದಸ್ಯರು, ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಗೌರವಧನವನ್ನು ಹೆಚ್ಚಿಸದೇ ಇರುವುದು ಕಾರ್ಯಕರ್ತೆಯರಿಗೆ ನಿರಾಶೆ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಹೊರತಂದಿದ್ದ ಪ್ರಣಾಳಿಕೆಯಲ್ಲಿ ಆರನೇ ಗ್ಯಾರಂಟಿಯಾಗಿ ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿತ್ತು. ಪ್ರಿಯಾಂಕಾ ಗಾಂಧಿ ಅವರ ಸಮ್ಮುಖದಲ್ಲಿ ಆರನೇ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಮುಂದಿನ ಮೇ ತಿಂಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಲಿದೆ. ಆದರೂ, ಆರನೇ ಗ್ಯಾರಂಟಿ ಅನುಷ್ಠಾನಕ್ಕೆ ತಂದಿಲ್ಲ ಎಂದು ಆಪಾದಿಸಿದರು. ಸೀರೆ ವಿತರಣೆಯ ಬದಲಿಗೆ ಗೌರವಧನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸದೇ ಬಜೆಟ್ನಲ್ಲಿ ಕೇವಲ ಸೀರೆ ನೀಡುವ ಪ್ರಸ್ತಾವ ಮಾಡಿರುವುದನ್ನು ವಿರೋಧಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಸದಸ್ಯರು, ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಗೌರವಧನವನ್ನು ಹೆಚ್ಚಿಸದೇ ಇರುವುದು ಕಾರ್ಯಕರ್ತೆಯರಿಗೆ ನಿರಾಶೆ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಹೊರತಂದಿದ್ದ ಪ್ರಣಾಳಿಕೆಯಲ್ಲಿ ಆರನೇ ಗ್ಯಾರಂಟಿಯಾಗಿ ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿತ್ತು. ಪ್ರಿಯಾಂಕಾ ಗಾಂಧಿ ಅವರ ಸಮ್ಮುಖದಲ್ಲಿ ಆರನೇ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಮುಂದಿನ ಮೇ ತಿಂಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಲಿದೆ. ಆದರೂ, ಆರನೇ ಗ್ಯಾರಂಟಿ ಅನುಷ್ಠಾನಕ್ಕೆ ತಂದಿಲ್ಲ ಎಂದು ಆಪಾದಿಸಿದರು. ಸೀರೆ ವಿತರಣೆಯ ಬದಲಿಗೆ ಗೌರವಧನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>