ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಮಂಗಳವಾರ ಸಂಜೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಭೇಟಿ ನೀಡಿ, ಒಕ್ಕೂಟದ ಮುಖಂಡರ ಜತೆ ಮಾತುಕತೆ ನಡೆಸಿದರು. ಇದೇ 28ಕ್ಕೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚಿಸುವುದಾಗಿ ಅವರು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದಿರುವುದಾಗಿ ಪ್ರತಿಭಟನಾ ನಿರತರು ತಿಳಿಸಿದರು.