<p><strong>ಬೆಂಗಳೂರು</strong>: ‘ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಒಂದು ವಾರದ ಒಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದರೆ ನಾವೇ ಗುಂಡಿಮುಚ್ಚಿ ಪ್ರತಿಭಟನೆ ಆರಂಭಿಸುತ್ತೇವೆ’ ಎಂದು ‘ಆರೋಹಣ’ ಫೌಂಡೇಷನ್ ಸಂಸ್ಥೆಯ ಸದಸ್ಯರು ತಿಳಿಸಿದ್ದಾರೆ.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. </p>.<p>‘ಗುಂಡಿ ಮುಚ್ಚುವಂತೆ ನಾವು ಬಿಬಿಎಂಪಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದೇವೆ. ಯಾವುದೇ ಸ್ಪಂದನೆ ದೊರೆಯದ ಕಾರಣ ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಇನ್ನು ಒಂದು ವಾರದಲ್ಲಿ ಬಿಬಿಎಂಪಿ ಕ್ರಮ ಕೈಗೊಳ್ಳಬೇಕು’ ಎಂದು ‘ಆರೋಹಣ’ ಫೌಂಡೇಷನ್ ಅಧ್ಯಕ್ಷ ಮಹಮ್ಮದ್ ರಾಯಿದ್ ಝೈನ್ ಗಡುವು ನೀಡಿದರು.</p>.<p>ವೈಟ್ಫೀಲ್ಡ್, ಬನ್ನೇರುಘಟ್ಟ ರಸ್ತೆ ಸೇರಿದಂತೆ ನಗರದ ಅನೇಕ ಕಡೆಗಳಲ್ಲಿ ಗುಂಡಿಗಳು ಬಿದ್ದಿವೆ. ಹೊಂಡಗಳಿಂದಾಗಿ ಅಪಘಾತಗಳು ಹೆಚ್ಚಿವೆ ಎಂದು ತಿಳಿಸಿದರು.</p>.<p>‘ಆರೋಹಣ’ ಫೌಂಡೇಷನ್ನ ಶ್ರೀಹರಿ ಶ್ರೀನಿವಾಸ್, ಇಮಾನ್ ಸಯಿದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಒಂದು ವಾರದ ಒಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದರೆ ನಾವೇ ಗುಂಡಿಮುಚ್ಚಿ ಪ್ರತಿಭಟನೆ ಆರಂಭಿಸುತ್ತೇವೆ’ ಎಂದು ‘ಆರೋಹಣ’ ಫೌಂಡೇಷನ್ ಸಂಸ್ಥೆಯ ಸದಸ್ಯರು ತಿಳಿಸಿದ್ದಾರೆ.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. </p>.<p>‘ಗುಂಡಿ ಮುಚ್ಚುವಂತೆ ನಾವು ಬಿಬಿಎಂಪಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದೇವೆ. ಯಾವುದೇ ಸ್ಪಂದನೆ ದೊರೆಯದ ಕಾರಣ ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಇನ್ನು ಒಂದು ವಾರದಲ್ಲಿ ಬಿಬಿಎಂಪಿ ಕ್ರಮ ಕೈಗೊಳ್ಳಬೇಕು’ ಎಂದು ‘ಆರೋಹಣ’ ಫೌಂಡೇಷನ್ ಅಧ್ಯಕ್ಷ ಮಹಮ್ಮದ್ ರಾಯಿದ್ ಝೈನ್ ಗಡುವು ನೀಡಿದರು.</p>.<p>ವೈಟ್ಫೀಲ್ಡ್, ಬನ್ನೇರುಘಟ್ಟ ರಸ್ತೆ ಸೇರಿದಂತೆ ನಗರದ ಅನೇಕ ಕಡೆಗಳಲ್ಲಿ ಗುಂಡಿಗಳು ಬಿದ್ದಿವೆ. ಹೊಂಡಗಳಿಂದಾಗಿ ಅಪಘಾತಗಳು ಹೆಚ್ಚಿವೆ ಎಂದು ತಿಳಿಸಿದರು.</p>.<p>‘ಆರೋಹಣ’ ಫೌಂಡೇಷನ್ನ ಶ್ರೀಹರಿ ಶ್ರೀನಿವಾಸ್, ಇಮಾನ್ ಸಯಿದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>