‘ಬಿಬಿಎಂಪಿಯಲ್ಲಿ ಕಾಯಂ ಕಾರ್ಮಿಕರಲ್ಲದೆ, 10,561 ಕಸ ಸಂಗ್ರಹಕಾರರು ಮತ್ತು ಆಟೊ, ಟಿಪ್ಪರ್ ಚಾಲಕರಿಗೆ ನ್ಯಾಯ ಒದಗಿಸಬೇಕು. ಅವರನ್ನೂ ಕಾಯಂಗೊಳಿಸಬೇಕು. ಗುತ್ತಿಗೆದಾರರ ಲಾಬಿಗೆ ಪಾಲಿಕೆ ಅಧಿಕಾರಿಗಳು ಮಣಿದಿದ್ದು, ತಳಮಟ್ಟದ ಕೆಲಸಗಾರರಿಗೆ ನ್ಯಾಯ ದೊರೆಯಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ಇನ್ನೊಂದು ವಾರದಲ್ಲಿ ಹೋರಾಟ ಮಾಡಲಾಗುತ್ತದೆ’ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಾಬು ಹೇಳಿದರು.