<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ (ಪಿಟಿಸಿಎಲ್) ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಸೋಮವಾರ 29ನೇ ದಿನ ಪೂರೈಸಿತು.</p>.<p>ಸಂವಿಧಾನ ಸಂರಕ್ಷಣಾ ಮಹಾಒಕ್ಕೂಟ ನೇತೃತ್ವದಲ್ಲಿ ಜ.2ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿ<br />ಸಲಾಗಿದೆ. ಭೂಮಿ ಕಳೆದುಕೊಂಡ ಸಂತ್ರಸ್ತರುಉದ್ಯಾನದಲ್ಲಿರುವ ಪೆಂಡಾಲ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು, ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ.</p>.<p>‘1978ರ ಕಾಯ್ದೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಲ್ಲಿಸುವ ಅರ್ಜಿಗಳನ್ನು ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯಗಳು ತಿರಸ್ಕರಿಸುತ್ತಿವೆ. ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಭೂಮಿ ಪರರ ಪಾಲಾಗುತ್ತಿದೆ’ ಎಂದು<br />ಪ್ರತಿಭಟನಕಾರರು ದೂರಿದರು.</p>.<p>‘ಬಲಾಢ್ಯರ ಅನ್ಯಾಯದಿಂದ ಭೂಮಿ ಕಳೆದುಕೊಂಡಿರುವ ಕೋಲಾರ, ತುಮಕೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. 29 ದಿನವಾದರೂ ಸರ್ಕಾರದ ಪ್ರತಿನಿಧಿಗಳು ಸ್ಥಳಕ್ಕೆ ಬಂದಿಲ್ಲ. ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಳಲು ಕೇಳುವವರು ಇಲ್ಲದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p class="Subhead">ಪ್ರತಿಭಟನೆ ಸ್ಥಳದಲ್ಲಿ ವೃದ್ಧೆ ಮೊಕ್ಕಾಂ: ಉಳುಮೆ ಮಾಡುತ್ತಿದ್ದ ಮೂರು ಎಕರೆ ಜಮೀನು ಕಳೆದುಕೊಂಡಿರುವ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಚನ್ನಾಪುರ ಹಟ್ಟಿಯ ನೀಲಾಬಾಯಿ ಪ್ರತಿಭಟನೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಅನೇಕ ವೃದ್ಧರು ಹಾಗೂ ಮಹಿಳೆಯರು ಸಹ ಪ್ರತಿಭಟನೆ ಸ್ಥಳದಲ್ಲಿದ್ದಾರೆ.</p>.<p>‘ಜಮೀನು ಕಬಳಿಸುವ ವ್ಯಕ್ತಿಗಳು, ನನಗೆ ಹಾಗೂ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಜಮೀನು ವಾಪಸು ಕೊಡಿಸುವವರೆಗೂ ಹೋರಾಟ ಮಾಡುತ್ತೇನೆ. ಚಳಿ ಜ್ವರ ಬಂದರೂ ವೇದಿಕೆಯಲ್ಲೇ ಮಲಗಿದ್ದೆ. ನ್ಯಾಯ ಸಿಗುವವರೆಗೂ ಊರಿಗೆ ಹೋಗುವುದಿಲ್ಲ’ ಎಂದು ನೀಲಾಬಾಯಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ (ಪಿಟಿಸಿಎಲ್) ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಸೋಮವಾರ 29ನೇ ದಿನ ಪೂರೈಸಿತು.</p>.<p>ಸಂವಿಧಾನ ಸಂರಕ್ಷಣಾ ಮಹಾಒಕ್ಕೂಟ ನೇತೃತ್ವದಲ್ಲಿ ಜ.2ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿ<br />ಸಲಾಗಿದೆ. ಭೂಮಿ ಕಳೆದುಕೊಂಡ ಸಂತ್ರಸ್ತರುಉದ್ಯಾನದಲ್ಲಿರುವ ಪೆಂಡಾಲ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು, ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ.</p>.<p>‘1978ರ ಕಾಯ್ದೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಲ್ಲಿಸುವ ಅರ್ಜಿಗಳನ್ನು ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯಗಳು ತಿರಸ್ಕರಿಸುತ್ತಿವೆ. ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಭೂಮಿ ಪರರ ಪಾಲಾಗುತ್ತಿದೆ’ ಎಂದು<br />ಪ್ರತಿಭಟನಕಾರರು ದೂರಿದರು.</p>.<p>‘ಬಲಾಢ್ಯರ ಅನ್ಯಾಯದಿಂದ ಭೂಮಿ ಕಳೆದುಕೊಂಡಿರುವ ಕೋಲಾರ, ತುಮಕೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. 29 ದಿನವಾದರೂ ಸರ್ಕಾರದ ಪ್ರತಿನಿಧಿಗಳು ಸ್ಥಳಕ್ಕೆ ಬಂದಿಲ್ಲ. ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಳಲು ಕೇಳುವವರು ಇಲ್ಲದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p class="Subhead">ಪ್ರತಿಭಟನೆ ಸ್ಥಳದಲ್ಲಿ ವೃದ್ಧೆ ಮೊಕ್ಕಾಂ: ಉಳುಮೆ ಮಾಡುತ್ತಿದ್ದ ಮೂರು ಎಕರೆ ಜಮೀನು ಕಳೆದುಕೊಂಡಿರುವ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಚನ್ನಾಪುರ ಹಟ್ಟಿಯ ನೀಲಾಬಾಯಿ ಪ್ರತಿಭಟನೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಅನೇಕ ವೃದ್ಧರು ಹಾಗೂ ಮಹಿಳೆಯರು ಸಹ ಪ್ರತಿಭಟನೆ ಸ್ಥಳದಲ್ಲಿದ್ದಾರೆ.</p>.<p>‘ಜಮೀನು ಕಬಳಿಸುವ ವ್ಯಕ್ತಿಗಳು, ನನಗೆ ಹಾಗೂ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಜಮೀನು ವಾಪಸು ಕೊಡಿಸುವವರೆಗೂ ಹೋರಾಟ ಮಾಡುತ್ತೇನೆ. ಚಳಿ ಜ್ವರ ಬಂದರೂ ವೇದಿಕೆಯಲ್ಲೇ ಮಲಗಿದ್ದೆ. ನ್ಯಾಯ ಸಿಗುವವರೆಗೂ ಊರಿಗೆ ಹೋಗುವುದಿಲ್ಲ’ ಎಂದು ನೀಲಾಬಾಯಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>