ರೈತ ಚಳವಳಿಗೆ ಜಯ: ಐಸಾ ಸಂಭ್ರಮಾಚರಣೆ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸಿದ ಚಳವಳಿಗೆ ಗೆಲುವು ಸಿಕ್ಕಿರುವ ಸಂಭ್ರಮದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (ಐಸಾ) ಸದಸ್ಯರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಶನಿವಾರ ವಿಜಯ ಜಾಥಾ ನಡೆಸಿದರು.
ರೈತ ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಕ್ರಾಂತಿಗೀತೆಗಳ ಮೂಲಕ ಗೌರವ ಸೂಚಿಸಲಾಯಿತು. ಘೋಷವಾಕ್ಯಗಳ ಮೂಲಕ ರೈತರ ಹೋರಾಟವನ್ನು ಸ್ಮರಿಸಲಾಯಿತು.
ಸಂಘಟನೆ ರಾಜ್ಯ ಸಂಚಾಲಕ ದೇವಯ್ಯ,‘ಹೋರಾಟದಲ್ಲಿದ್ದ ರೈತರ ಮೇಲೆ ಶೋಷಣೆ ನಡೆಸಿದ ಮೋದಿ ಸರ್ಕಾರ ಕ್ಷಮಾಪಣೆ ಕೇಳಬೇಕು. ರಾಜ್ಯದಲ್ಲಿ ಜಾರಿಯಲ್ಲಿರುವ ರೈತ-ವಿರೋಧಿ ಕಾಯ್ದೆಗಳನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
‘ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಪಡೆಯುವುದನ್ನು ಕಾನೂನಾತ್ಮಕ ಹಕ್ಕಾಗಿ ಘೋಷಿಸಬೇಕು’ ಎಂದು ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.