<p><strong>ಬೆಂಗಳೂರು</strong>: ರಾಜ್ಯದಲ್ಲಿರುವ ಬಡವರಿಗೆ, ಆದಿವಾಸಿಗಳಿಗೆ ಭೂಮಿ ಮತ್ತು ವಸತಿ ಹಕ್ಕು ಕಲ್ಪಿಸಬೇಕು ಎಂದು ಆಗ್ರಹಿಸಿ ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಕಾರ್ಯಕರ್ತರು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಬರಿಹೊಟ್ಟೆ ಸತ್ಯಾಗ್ರಹ ನಡೆಸಿದರು. </p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.</p>.<p>ಬರಿಹೊಟ್ಟೆ ಸತ್ಯಾಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದ ಲೇಖಕಿ ವಿಜಯಾ, ‘ಬಡ ಜನರಿಗೆ ಭೂಮಿ ಮತ್ತು ನಿವೇಶನದ ಹಕ್ಕು ದೊರೆಯುವವರೆಗೂ ಹೋರಾಟ ಮುಂದುವರಿಸಲಾಗುವುದು. ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಸಭೆ ಕರೆಯುವರೆಗೂ ಸತ್ಯಾಗ್ರಹ ಮುಂದುವರಿಸುತ್ತೇವೆ’ ಎಂದರು.</p>.<p>ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್, ‘ಭೂ ವಂಚಿತರಿಗೆ ಭೂಮಿ ಹಾಗೂ ಬಡವರಿಗೆ ವಸತಿ ಸೌಲಭ್ಯ ದೊರೆಯುವವರೆಗೂ ಈ ದೇಶಕ್ಕೆ ಪೂರ್ಣ ಸ್ವಾತಂತ್ರ್ಯ ದೊರೆಯದು. ಸ್ವಾತಂತ್ರ್ಯದ ಅರ್ಥ ಪರಿಪೂರ್ಣಗೊಳ್ಳಬೇಕಿದ್ದರೆ ಎಲ್ಲ ಬಡವರಿಗೂ ಭೂಮಿ ದೊರೆಯಬೇಕು. ಈ ಹಿಂದೆ ಆಡಳಿತ ನಡೆಸಿದ್ದ ಸಿದ್ದರಾಮಯ್ಯ ಸರ್ಕಾರ ಉನ್ನತ ಮಟ್ಟದ ಸಭೆ ನಡೆಸಿತ್ತು. ಬಡವರನ್ನು ಒಕ್ಕಲೆಬ್ಬಿಸಬಾರದು ಮತ್ತು ಅವರಿಗೆ ಭೂಮಿ ಹಕ್ಕು ನೀಡಲು ಅರ್ಜಿ ನಮೂನೆ 57 ಅನ್ನು ಸಿದ್ಧಪಡಿಸಿ, ಭರ್ತಿ ಮಾಡಿಸಿಕೊಂಡಿತ್ತು. ಆದರೆ, ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲಿಲ್ಲ’ ಎಂದು ದೂರಿದರು. </p>.<p>ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ‘ರಾಜ್ಯದಲ್ಲಿ ಬಡವರಿಗೆ ಭೂಮಿ ಹಂಚಲು ಸಾಕಷ್ಟು ಭೂಮಿ ಇದೆ. ಕೇವಲ ಒಂದು ವಾರದಲ್ಲಿ ಬಡವರ ಭೂಮಿ, ವಸತಿ ಸಮಸ್ಯೆಯನ್ನು ಪರಿಹರಿಸಬಹುದು. ಆದರೆ, ಬಡವರ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ವಂಚಿಸಲಾಗುತ್ತಿದೆ’ ಎಂದರು.</p>.<p>‘ಸಂಘ ಪರಿವಾರದವರು ಭೂಮಿಗಾಗಿ ಯಾವುದೇ ಅರ್ಜಿ ಹಾಕಿರಲಿಲ್ಲ. ಆದರೂ, ರಾಜ್ಯದ ಹಲವೆಡೆ ಸಂಘ ಪರಿವಾರಕ್ಕೆ ಭೂಮಿ ನೀಡಲಾಗಿದೆ. ಐದಾರು ದಶಕಗಳಿಂದ ಬಡವರು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಹಲವು ಬಾರಿ ಅರ್ಜಿಗಳನ್ನು ಸಲ್ಲಿಸಿದ್ದರೂ ಭೂಮಿ ನೀಡುತ್ತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿರುವ ಬಡವರಿಗೆ, ಆದಿವಾಸಿಗಳಿಗೆ ಭೂಮಿ ಮತ್ತು ವಸತಿ ಹಕ್ಕು ಕಲ್ಪಿಸಬೇಕು ಎಂದು ಆಗ್ರಹಿಸಿ ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಕಾರ್ಯಕರ್ತರು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಬರಿಹೊಟ್ಟೆ ಸತ್ಯಾಗ್ರಹ ನಡೆಸಿದರು. </p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.</p>.<p>ಬರಿಹೊಟ್ಟೆ ಸತ್ಯಾಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದ ಲೇಖಕಿ ವಿಜಯಾ, ‘ಬಡ ಜನರಿಗೆ ಭೂಮಿ ಮತ್ತು ನಿವೇಶನದ ಹಕ್ಕು ದೊರೆಯುವವರೆಗೂ ಹೋರಾಟ ಮುಂದುವರಿಸಲಾಗುವುದು. ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಸಭೆ ಕರೆಯುವರೆಗೂ ಸತ್ಯಾಗ್ರಹ ಮುಂದುವರಿಸುತ್ತೇವೆ’ ಎಂದರು.</p>.<p>ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್, ‘ಭೂ ವಂಚಿತರಿಗೆ ಭೂಮಿ ಹಾಗೂ ಬಡವರಿಗೆ ವಸತಿ ಸೌಲಭ್ಯ ದೊರೆಯುವವರೆಗೂ ಈ ದೇಶಕ್ಕೆ ಪೂರ್ಣ ಸ್ವಾತಂತ್ರ್ಯ ದೊರೆಯದು. ಸ್ವಾತಂತ್ರ್ಯದ ಅರ್ಥ ಪರಿಪೂರ್ಣಗೊಳ್ಳಬೇಕಿದ್ದರೆ ಎಲ್ಲ ಬಡವರಿಗೂ ಭೂಮಿ ದೊರೆಯಬೇಕು. ಈ ಹಿಂದೆ ಆಡಳಿತ ನಡೆಸಿದ್ದ ಸಿದ್ದರಾಮಯ್ಯ ಸರ್ಕಾರ ಉನ್ನತ ಮಟ್ಟದ ಸಭೆ ನಡೆಸಿತ್ತು. ಬಡವರನ್ನು ಒಕ್ಕಲೆಬ್ಬಿಸಬಾರದು ಮತ್ತು ಅವರಿಗೆ ಭೂಮಿ ಹಕ್ಕು ನೀಡಲು ಅರ್ಜಿ ನಮೂನೆ 57 ಅನ್ನು ಸಿದ್ಧಪಡಿಸಿ, ಭರ್ತಿ ಮಾಡಿಸಿಕೊಂಡಿತ್ತು. ಆದರೆ, ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲಿಲ್ಲ’ ಎಂದು ದೂರಿದರು. </p>.<p>ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ‘ರಾಜ್ಯದಲ್ಲಿ ಬಡವರಿಗೆ ಭೂಮಿ ಹಂಚಲು ಸಾಕಷ್ಟು ಭೂಮಿ ಇದೆ. ಕೇವಲ ಒಂದು ವಾರದಲ್ಲಿ ಬಡವರ ಭೂಮಿ, ವಸತಿ ಸಮಸ್ಯೆಯನ್ನು ಪರಿಹರಿಸಬಹುದು. ಆದರೆ, ಬಡವರ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ವಂಚಿಸಲಾಗುತ್ತಿದೆ’ ಎಂದರು.</p>.<p>‘ಸಂಘ ಪರಿವಾರದವರು ಭೂಮಿಗಾಗಿ ಯಾವುದೇ ಅರ್ಜಿ ಹಾಕಿರಲಿಲ್ಲ. ಆದರೂ, ರಾಜ್ಯದ ಹಲವೆಡೆ ಸಂಘ ಪರಿವಾರಕ್ಕೆ ಭೂಮಿ ನೀಡಲಾಗಿದೆ. ಐದಾರು ದಶಕಗಳಿಂದ ಬಡವರು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಹಲವು ಬಾರಿ ಅರ್ಜಿಗಳನ್ನು ಸಲ್ಲಿಸಿದ್ದರೂ ಭೂಮಿ ನೀಡುತ್ತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>