ಅಂಬೇಡ್ಕರ್ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಕ್ರಾಂತಿರಾಜು ಮಾತನಾಡಿ, ‘ಕನ್ನಡ ಚಿತ್ರರಂಗಕ್ಕೆ ರಾಜ್ಕುಮಾರ್ ಹಾಗೂ ವಿಷ್ಣುವರ್ಧನ್ ಎರಡು ಕಣ್ಣುಗಳು ಇದ್ದಂತೆ. ವಿಷ್ಣುವರ್ಧನ್ ಅವರದ್ದು ಸರಳ ವ್ಯಕ್ತಿತ್ವವಾಗಿತ್ತು. ಮಾದರಿ ವ್ಯಕ್ತಿಯಾಗಿ ಜೀವನ ಸಾಗಿಸಿದ್ದರು. ಅವರು ಮೃತಪಟ್ಟು 14 ವರ್ಷ ಕಳೆದಿದೆ. ಅಂತಿಮ ಸಂಸ್ಕಾರ ಅಭಿಮಾನ್ ಸ್ಟುಡಿಯೊ ಅವರಣದಲ್ಲಿ ನೇರವೇರಿತ್ತು. ಆ ಜಾಗದಲ್ಲಿ ಸ್ಮಾರಕವಾಗಬೇಕು ಎಂಬ ಬೇಡಿಕೆಯಿತ್ತು. ಆದರೆ, ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನಿರ್ಲಕ್ಷ್ಯ ತೋರುತ್ತಿದೆ’ ಎಂದು ದೂರಿದರು.