<p><strong>ಬೆಂಗಳೂರು: </strong>ರಾಜರಾಜೇಶ್ವರಿನಗರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸ್ಮಶಾನ ಜಾಗದಲ್ಲಿ ರಸ್ತೆ ನಿರ್ಮಿಸುವ ಕಾರ್ಯಕ್ಕೆ ಸ್ಥಳೀಯರು ತಡೆ ಒಡ್ಡಿ ಪ್ರತಿಭಟನೆ ನಡೆಸಿದರು.</p>.<p>‘ರಾಜರಾಜೇಶ್ವರಿನಗರದಿಂದ ಉತ್ತರಹಳ್ಳಿ ರಸ್ತೆಗೆ ಸಂಪರ್ಕ ಕಲ್ಪಿಸುವ ಕೆಂಚನಹಳ್ಳಿ ರಸ್ತೆಗೆ ಹೊಂದಿಕೊಂಡಂತೆ ಸ್ಮಶಾನವಿದ್ದು, ಆ ಜಾಗವನ್ನು ರಸ್ತೆ ವಿಸ್ತರಣೆಗೆ ಬಳಕೆ ಮಾಡಿಕೊಳ್ಳಲು ಯತ್ನಿಸಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದರು.</p>.<p>ಜೆಸಿಬಿ ಮೂಲಕ ಆರಂಭಿಸಿದ್ದ ಕೆಲಸ ತಡೆದ ಪ್ರತಿಭಟನಕಾರರು, ಯಾವುದೇ ಕಾರಣಕ್ಕೂ ಈ ಜಾಗದಲ್ಲಿ ರಸ್ತೆ ಅಭಿವೃದ್ಧಿಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>‘ಹಲಗೆವಡೇರಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಮಾದಿಗ ಸಮುದಾಯದವರಿಗೆ ಸ್ಮಶಾನಕ್ಕೆಂದು ಮೀಸಲಿಟ್ಟಿದ್ದ 2 ಎಕರೆ ಜಾಗ ಇತ್ತು. ಒತ್ತುವರಿಯಾಗಿ ಈಗ ಅರ್ಧ ಎಕರೆಯಷ್ಟು ಜಾಗ ಮಾತ್ರ ಉಳಿದಿದೆ. ಅದನ್ನೂ ರಸ್ತೆ ವಿಸ್ತರಣೆಗೆ ಬಳಸಿಕೊಂಡರೆ ಸ್ಮಶಾನವೇ ಇಲ್ಲದಂತೆ ಆಗಲಿದೆ’ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಜೇಶ್ ಅವರುಹೇಳಿದರು.</p>.<p>‘ಈ ರಸ್ತೆಯಲ್ಲಿ ಈಗಾಗಲೇ ವೈಟ್ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಆದರೂ ಸಂಚಾರ ದಟ್ಟಣೆ ನೆಪದಲ್ಲಿ ಸ್ಮಶಾನ ಜಾಗ ಪಡೆಯಲು ಶಾಸಕರು ಹೊರಟಿದ್ದಾರೆ. ಅದರ ಎದುರಿನಲ್ಲಿ ಶಾಸಕರ<br />ಕಚೇರಿ ಇದ್ದು, ಅದನ್ನು ಬಿಟ್ಟು ದಲಿತರ ಸ್ಮಶಾನದ ಜಾಗದಲ್ಲೇ ರಸ್ತೆ ನಿರ್ಮಿಸುವುದು ಸರಿಯಲ್ಲ’ ಎಂದು ಹೇಳಿದರು.</p>.<p>ಸ್ಥಳಕ್ಕೆ ಬಂದ ತೋಟಗಾರಿಕಾ ಸಚಿವ ಮುನಿರತ್ನ ಅವರು ಪ್ರತಿಭಟನಕಾರರ ಮನವೊಲಿಸಲು ಯತ್ನಿಸಿದರು. ಪ್ರತಿಭಟನಕಾರರು ಪಟ್ಟು ಸಡಿಲಿಸದೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಕಾಮಗಾರಿಸ್ಥಗಿತಗೊಳಿಸಲು ಸಚಿವರು ಸೂಚಿಸಿದರು.</p>.<p>ಸ್ಥಳೀಯ ಮುಖಂಡರಾದ ಕೆ.ಸೋಮಶೇಖರ್, ಎಸ್. ದೇವರಾಜ್, ಜೆ.ಮುನಿರಾಜು, ಎಚ್.ಬಿ.ತಿಮ್ಮರಾಜು, ಎನ್.ರಾಜಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮುನಿರತ್ನ ಅವರು, ‘ರಸ್ತೆ ವಿಸ್ತರಣೆ ಆಗಬೇಕಿದ್ದು, ಅದಕ್ಕೆ ಸ್ಮಶಾನ ಜಾಗ ಬಳಕೆ ಮಾಡಿಕೊಳ್ಳುತ್ತಿಲ್ಲ. ಅದರ ಅಗತ್ಯವೂ ಇಲ್ಲ. ಸರ್ಕಾರಿಜಾಗದಲ್ಲಿ ರಸ್ತೆ ವಿಸ್ತರಣೆ ಮಾಡಲಾಗುವುದು’ ಎಂದು ಸ್ಪಷ್ಟ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜರಾಜೇಶ್ವರಿನಗರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸ್ಮಶಾನ ಜಾಗದಲ್ಲಿ ರಸ್ತೆ ನಿರ್ಮಿಸುವ ಕಾರ್ಯಕ್ಕೆ ಸ್ಥಳೀಯರು ತಡೆ ಒಡ್ಡಿ ಪ್ರತಿಭಟನೆ ನಡೆಸಿದರು.</p>.<p>‘ರಾಜರಾಜೇಶ್ವರಿನಗರದಿಂದ ಉತ್ತರಹಳ್ಳಿ ರಸ್ತೆಗೆ ಸಂಪರ್ಕ ಕಲ್ಪಿಸುವ ಕೆಂಚನಹಳ್ಳಿ ರಸ್ತೆಗೆ ಹೊಂದಿಕೊಂಡಂತೆ ಸ್ಮಶಾನವಿದ್ದು, ಆ ಜಾಗವನ್ನು ರಸ್ತೆ ವಿಸ್ತರಣೆಗೆ ಬಳಕೆ ಮಾಡಿಕೊಳ್ಳಲು ಯತ್ನಿಸಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದರು.</p>.<p>ಜೆಸಿಬಿ ಮೂಲಕ ಆರಂಭಿಸಿದ್ದ ಕೆಲಸ ತಡೆದ ಪ್ರತಿಭಟನಕಾರರು, ಯಾವುದೇ ಕಾರಣಕ್ಕೂ ಈ ಜಾಗದಲ್ಲಿ ರಸ್ತೆ ಅಭಿವೃದ್ಧಿಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>‘ಹಲಗೆವಡೇರಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಮಾದಿಗ ಸಮುದಾಯದವರಿಗೆ ಸ್ಮಶಾನಕ್ಕೆಂದು ಮೀಸಲಿಟ್ಟಿದ್ದ 2 ಎಕರೆ ಜಾಗ ಇತ್ತು. ಒತ್ತುವರಿಯಾಗಿ ಈಗ ಅರ್ಧ ಎಕರೆಯಷ್ಟು ಜಾಗ ಮಾತ್ರ ಉಳಿದಿದೆ. ಅದನ್ನೂ ರಸ್ತೆ ವಿಸ್ತರಣೆಗೆ ಬಳಸಿಕೊಂಡರೆ ಸ್ಮಶಾನವೇ ಇಲ್ಲದಂತೆ ಆಗಲಿದೆ’ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಜೇಶ್ ಅವರುಹೇಳಿದರು.</p>.<p>‘ಈ ರಸ್ತೆಯಲ್ಲಿ ಈಗಾಗಲೇ ವೈಟ್ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಆದರೂ ಸಂಚಾರ ದಟ್ಟಣೆ ನೆಪದಲ್ಲಿ ಸ್ಮಶಾನ ಜಾಗ ಪಡೆಯಲು ಶಾಸಕರು ಹೊರಟಿದ್ದಾರೆ. ಅದರ ಎದುರಿನಲ್ಲಿ ಶಾಸಕರ<br />ಕಚೇರಿ ಇದ್ದು, ಅದನ್ನು ಬಿಟ್ಟು ದಲಿತರ ಸ್ಮಶಾನದ ಜಾಗದಲ್ಲೇ ರಸ್ತೆ ನಿರ್ಮಿಸುವುದು ಸರಿಯಲ್ಲ’ ಎಂದು ಹೇಳಿದರು.</p>.<p>ಸ್ಥಳಕ್ಕೆ ಬಂದ ತೋಟಗಾರಿಕಾ ಸಚಿವ ಮುನಿರತ್ನ ಅವರು ಪ್ರತಿಭಟನಕಾರರ ಮನವೊಲಿಸಲು ಯತ್ನಿಸಿದರು. ಪ್ರತಿಭಟನಕಾರರು ಪಟ್ಟು ಸಡಿಲಿಸದೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಕಾಮಗಾರಿಸ್ಥಗಿತಗೊಳಿಸಲು ಸಚಿವರು ಸೂಚಿಸಿದರು.</p>.<p>ಸ್ಥಳೀಯ ಮುಖಂಡರಾದ ಕೆ.ಸೋಮಶೇಖರ್, ಎಸ್. ದೇವರಾಜ್, ಜೆ.ಮುನಿರಾಜು, ಎಚ್.ಬಿ.ತಿಮ್ಮರಾಜು, ಎನ್.ರಾಜಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮುನಿರತ್ನ ಅವರು, ‘ರಸ್ತೆ ವಿಸ್ತರಣೆ ಆಗಬೇಕಿದ್ದು, ಅದಕ್ಕೆ ಸ್ಮಶಾನ ಜಾಗ ಬಳಕೆ ಮಾಡಿಕೊಳ್ಳುತ್ತಿಲ್ಲ. ಅದರ ಅಗತ್ಯವೂ ಇಲ್ಲ. ಸರ್ಕಾರಿಜಾಗದಲ್ಲಿ ರಸ್ತೆ ವಿಸ್ತರಣೆ ಮಾಡಲಾಗುವುದು’ ಎಂದು ಸ್ಪಷ್ಟ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>