ಬೆಂಗಳೂರು: ‘ಗಣರಾಜ್ಯೋತ್ಸವ ದಿನದ ಕಾರ್ಯಕ್ರಮದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಗೌರವ ತೋರಿರುವನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಕೂಡಲೇವಜಾಗೊಳಿಸಬೇಕು’ ಎಂದು ಆಗ್ರಹಿಸಿವಕೀಲರು, ಪ್ರಗತಿಪರ, ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ವಿಧಾನಸೌಧದ ಮುಂದೆ ಇರುವ ಅಂಬೇಡ್ಕರ್ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ನಿರ್ಮಿಸುವ ಮೂಲಕ, ಘಟನೆಯನ್ನು ಖಂಡಿಸಿದರು.