ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್‌ ಪೀಠ ಸ್ಥಾಪನೆಗೆ ಆಗ್ರಹ

Last Updated 22 ಜೂನ್ 2019, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ದಕ್ಷಿಣ ಭಾರತದಲ್ಲಿ ಸುಪ್ರೀಂ ಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಬೇಕು’ ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಮೌರ್ಯ ಸರ್ಕಲ್‌ನಲ್ಲಿ ಜಮಾಯಿಸಿದ ಪ್ರತಿಭಟನೆಯಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ, ಹಿರಿಯ ವಕೀಲ ವಿವೇಕ್ ರೆಡ್ಡಿ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು.

‘ಬೆಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪನೆ ಮಾಡುವುದರಿಂದ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳ ಸೇರಿದಂತೆ ಕೇಂದ್ರಾಡಳಿತ ಪ್ರದೇಶದ ಬಡ ಕಕ್ಷಿದಾರರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಆದಷ್ಟು ಶೀಘ್ರವೇ ಈ ದಿಸೆಯಲ್ಲಿ ಗಮನಹರಿಸಬೇಕು’ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT