ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಆರಂಭವಾಗಬೇಕಿತ್ತು. ಸಚಿವ ಬೈರತಿ ಬಸವರಾಜ ಅವರು ತಾಲ್ಲೂಕು ಆಸ್ಪತ್ರೆ ಅವ್ಯವಸ್ಥೆ ಕುರಿತು ಪರಿಶೀಲನೆಗೆ ತೆರಳಿದ್ದರಿಂದ ಹದಿನೈದು ನಿಮಿಷ ತಡವಾಗಿತ್ತು. ಸಚಿವರ ಬರುವಿಕೆಗಾಗಿ ವಿಶೇಷ ತಹಶಿಲ್ದಾರ್ ನಾಗಪ್ರಶಾಂತ್ ದಾರಿ ಕಾಯುತ್ತ ನಿಂತಿದ್ದರು. ಶಾಸಕ ಅರವಿಂದ ಲಿಂಬಾವಳಿ, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ಸಂಸದ ಪಿ.ಸಿ.ಮೋಹನ್, ನಂದೀಶ್ ರೆಡ್ಡಿ, ಪದ್ಮನಾಭ ರೆಡ್ಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.