<p>ಕೆ.ಆರ್.ಪುರ: ಅರಣ್ಯ ಇಲಾಖೆ ಒತ್ತುವರಿ ತೆರವು ಹೆಸರಿನಲ್ಲಿ, ದಶಕಗಳಿಂದ ನೆಲಸಿರುವ ನಿವಾಸಿಗಳನ್ನು ಒಕ್ಕಲೆಬ್ಬಿಸುತ್ತಿದೆ ಎಂದು ಆರೋಪಿಸಿ ದಿನ್ನೂರು ಗ್ರಾಮದ ಸರ್ವೇ ನಂಬರ್ 1ರಲ್ಲಿನ ದಿನ್ನೂರು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳು ಹದಿನೈದು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.</p>.<p>ದಿನ್ನೂರಿನಲ್ಲಿ ಜೂನ್ 23 ರಿಂದ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದೆ. ಅಂದಿನಿಂದಲೇ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ರೈತ, ದಲಿತ, ಕಾರ್ಮಿಕ ಸಂಘಟನೆ, ರಾಜಕೀಯ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>‘ದಿನ್ನೂರಿನಲ್ಲಿ ಒತ್ತುವರಿ ತೆರವು ಹೆಸರಿನಲ್ಲಿ ಅರಣ್ಯ ಇಲಾಖೆ ನಮ್ಮ ಜಮೀನುಗಳನ್ನು ಕಿತ್ತುಕೊಳ್ಳಲು ಮುಂದಾಗಿದೆ. ಗ್ರಾಮದ ಹಿರಿಯರಿಗೆ ಅಂದಿನ ಮೈಸೂರಿನ ಮಹಾರಾಜರು ಜಮೀನುಗಳನ್ನು ಹಂಚಿಕೆ ಮಾಡಿದ್ದರು. ಅಂದಿನಿಂದ ಇಂದಿನವರೆಗೆ ಕೃಷಿ ಚಟುವಟಿಕೆಗಳನ್ನು ಮಾಡುತ್ತಾ ಬಂದಿದ್ದೇವೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಮ್ಮ ಹಿರಿಯರು ಕಾಪಾಡಿಕೊಂಡು ಬಂದಿರುವ ಜಮೀನನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ’ ಎಂದು ಎಚ್ಚರಿಸಿದರು.</p>.<p>ಮಾಜಿ ಸಂಸದ ಮುನಿಸ್ವಾಮಿ, ಕರ್ನಾಟಕ ಜನಾಂದೋಲನ ಸಂಘಟನೆಯ ಅಧ್ಯಕ್ಷ ಮರಿಯಪ್ಪ, ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕನ್ನಲ್ಲಿ ಕೃಷ್ಣಪ್ಪ, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಎನ್.ರಾಜಣ್ಣ, ಸಾಮಾಜಿಕ ಕಾರ್ಯಕರ್ತ ಎಂ.ಆರ್.ರಫೀಕ್, ದಲಿತ ಮುಖಂಡರಾದ ಜಯಮ್ಮ, ಮುನಿರಾಜು, ಡಿಎಸ್ಎಸ್ ರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ಅರಣ್ಯ ಇಲಾಖೆ ಒತ್ತುವರಿ ತೆರವು ಹೆಸರಿನಲ್ಲಿ, ದಶಕಗಳಿಂದ ನೆಲಸಿರುವ ನಿವಾಸಿಗಳನ್ನು ಒಕ್ಕಲೆಬ್ಬಿಸುತ್ತಿದೆ ಎಂದು ಆರೋಪಿಸಿ ದಿನ್ನೂರು ಗ್ರಾಮದ ಸರ್ವೇ ನಂಬರ್ 1ರಲ್ಲಿನ ದಿನ್ನೂರು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳು ಹದಿನೈದು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.</p>.<p>ದಿನ್ನೂರಿನಲ್ಲಿ ಜೂನ್ 23 ರಿಂದ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದೆ. ಅಂದಿನಿಂದಲೇ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ರೈತ, ದಲಿತ, ಕಾರ್ಮಿಕ ಸಂಘಟನೆ, ರಾಜಕೀಯ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>‘ದಿನ್ನೂರಿನಲ್ಲಿ ಒತ್ತುವರಿ ತೆರವು ಹೆಸರಿನಲ್ಲಿ ಅರಣ್ಯ ಇಲಾಖೆ ನಮ್ಮ ಜಮೀನುಗಳನ್ನು ಕಿತ್ತುಕೊಳ್ಳಲು ಮುಂದಾಗಿದೆ. ಗ್ರಾಮದ ಹಿರಿಯರಿಗೆ ಅಂದಿನ ಮೈಸೂರಿನ ಮಹಾರಾಜರು ಜಮೀನುಗಳನ್ನು ಹಂಚಿಕೆ ಮಾಡಿದ್ದರು. ಅಂದಿನಿಂದ ಇಂದಿನವರೆಗೆ ಕೃಷಿ ಚಟುವಟಿಕೆಗಳನ್ನು ಮಾಡುತ್ತಾ ಬಂದಿದ್ದೇವೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಮ್ಮ ಹಿರಿಯರು ಕಾಪಾಡಿಕೊಂಡು ಬಂದಿರುವ ಜಮೀನನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ’ ಎಂದು ಎಚ್ಚರಿಸಿದರು.</p>.<p>ಮಾಜಿ ಸಂಸದ ಮುನಿಸ್ವಾಮಿ, ಕರ್ನಾಟಕ ಜನಾಂದೋಲನ ಸಂಘಟನೆಯ ಅಧ್ಯಕ್ಷ ಮರಿಯಪ್ಪ, ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕನ್ನಲ್ಲಿ ಕೃಷ್ಣಪ್ಪ, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಎನ್.ರಾಜಣ್ಣ, ಸಾಮಾಜಿಕ ಕಾರ್ಯಕರ್ತ ಎಂ.ಆರ್.ರಫೀಕ್, ದಲಿತ ಮುಖಂಡರಾದ ಜಯಮ್ಮ, ಮುನಿರಾಜು, ಡಿಎಸ್ಎಸ್ ರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>