ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ನಗದು ರಹಿತ ಆರೋಗ್ಯ ಸೇವೆ ನೀಡಿ: ಸರ್ಕಾರಿ ನಿವೃತ್ತ ನೌಕರರ ಸಂಘ ಒತ್ತಾಯ

Published : 4 ಏಪ್ರಿಲ್ 2025, 15:16 IST
Last Updated : 4 ಏಪ್ರಿಲ್ 2025, 15:16 IST
ಫಾಲೋ ಮಾಡಿ
Comments
'ಹಂತ ಹಂತವಾಗಿ ಬೇಡಿಕೆ ಈಡೇರಿಕೆ’
‘ರಾಜ್ಯ ಸರ್ಕಾರಿ ನಿವೃತ್ತ ನೌಕರರ ಮತ್ತು ಕುಟುಂಬ ಪಿಂಚಣಿದಾರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಕೆಲವು ಬೇಡಿಕೆಗಳು ಪಕ್ಷದ ಪ್ರಣಾಳಿಕೆಯಲ್ಲೂ ಇದ್ದು ಸರ್ಕಾರ ಇವುಗಳನ್ನು ನಿಶ್ಚಿತವಾಗಿ ಈಡೇರಿಸುತ್ತದೆ. ಕೆಲವು ಹಣಕಾಸಿನ ವಿಷಯ ಆಗಿರುವುದರಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ಆರೋಗ್ಯ ವಿಮಾ ಸೌಲಭ್ಯ ನಿವೃತ್ತ ನೌಕರರು ಮತ್ತು ಕುಟುಂಬ ವರ್ಗದವರಿಗೆ ಕೆಎಸ್‌ಆರ್‌ಟಿಸಿ ಮತ್ತು ನಗರ ಸಾರಿಗೆ ಬಸ್‌ಗಳಲ್ಲಿ ಶೇಕಡ 25-50 ರಷ್ಟು ರಿಯಾಯಿತಿ ನೀಡಬೇಕು ಎಂಬಂತಹ ಬೇಡಿಕೆಗಳು ನ್ಯಾಯಯುತವಾಗಿವೆ. ಇವು ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆ ಎನಿಸುವುದಿಲ್ಲ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT