‘ಈ ಹೊಸ ಪಿಂಚಣಿ ವ್ಯವಸ್ಥೆಯಲ್ಲಿ ಉದ್ಯೋಗದಾತನಿಂದ ಶೇ 10 ರಷ್ಟು ಮತ್ತು ಸರ್ಕಾರ ಶೇ 14ರಷ್ಟು ಹಣ ಕೊಡಬೇಕು. ಈ ಮೊತ್ತವನ್ನು ಸರ್ಕಾರ ಬೇರೊಂದು ಕಡೆಗೆ ಹೂಡಿಕೆ ಮಾಡಿ ಅದರಿಂದ ಪಿಂಚಣಿ ನೀಡಲಾಗುತ್ತದೆ. ಈ ವ್ಯವಸ್ಥೆ 2006ರ ಏಪ್ರಿಲ್ 1ರಿಂದ ಜಾರಿಯಾಗಿದೆ. ಆದರೆ, ಶಿಕ್ಷಣ ಇಲಾಖೆಯಲ್ಲಿ ಅನುದಾನಿತ ಹಾಗೂ ಅನುದಾನರಹಿತ ಎಂಬ ವ್ಯವಸ್ಥೆ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸೇವೆಯನ್ನು ಪರಿಗಣಿಸಿ ವಯೋನಿವೃತ್ತಿ ಪಿಂಚಣಿ ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.