<p><strong>ಪೀಣ್ಯ ದಾಸರಹಳ್ಳಿ:</strong> ‘ಜನ್ಮದಿನ ಹಾಗೂ ಹಬ್ಬಗಳಲ್ಲಿ ದುಂದುವೆಚ್ಚ ಮಾಡುವ ಬದಲಾಗಿ ಬಡ ಜನರಿಗೆ ನೆರವು ನೀಡುವ ಮೂಲಕ ಜೀವನದಲ್ಲಿ ಸಾರ್ಥಕತೆ ಮೆರೆಯಬೇಕು' ಎಂದು ಶಾಸಕ ಎಸ್.ಮುನಿರಾಜು ತಿಳಿಸಿದರು.</p>.<p>ಬಾಗಲಗುಂಟೆಯ ಶ್ರೀಸಾಯಿ ಕಲ್ಯಾಣ ಮಂಟಪದಲ್ಲಿ ತಮ್ಮ ಜನ್ಮದಿನದ ಪ್ರಯುಕ್ತ ಕಾರ್ಯಕರ್ತರು ಆಯೋಜಿಸಿದ್ದ 'ಅಭಿಮಾನೋತ್ಸವ' ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜೀವಿತ ಅವಧಿಯಲ್ಲಿ ಸಮಾಜಕ್ಕೆ ನಾವು ನೀಡುವ ಕೊಡುಗೆ ಶಾಶ್ವತವಾಗಿ ಉಳಿಯಲಿದೆ. ಆದ್ದರಿಂದ, ಮೌಲ್ಯಯುತವಾಗಿ ಸೇವೆ ಮಾಡಿ' ಎಂದು ಮನವಿ ನೀಡಿದರು.</p>.<p>‘ಹಾರ ತುರಾಯಿ ಬದಲಿಗೆ ಸಾವಿರಾರು ಪುಸ್ತಕಗಳನ್ನು ಜನರು ಉಡುಗೊರೆಯಾಗಿ ನೀಡಿದ್ದಾರೆ. ಅವುಗಳನ್ನು ಕ್ಷೇತ್ರದ ಸರ್ಕಾರಿ ಶಾಲಾ– ಕಾಲೇಜುಗಳಿಗೆ ನೀಡುತ್ತೇನೆ' ಎಂದರು.</p>.<p>ಜನ್ಮದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. </p>.<p>ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ಸೌಂದರ್ಯ ಅವರ ನೇತೃತ್ವದಲ್ಲಿ ಬಡವರಿಗೆ ತಳ್ಳುವ ಗಾಡಿಯನ್ನು ಮುನಿರಾಜು ವಿತರಿಸಿದರು.</p>.<p>ಇದೇ ವೇಳೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಟ್ಯಾಕ್ಸಿಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ಜನ್ಮದಿನ ಹಾಗೂ ಹಬ್ಬಗಳಲ್ಲಿ ದುಂದುವೆಚ್ಚ ಮಾಡುವ ಬದಲಾಗಿ ಬಡ ಜನರಿಗೆ ನೆರವು ನೀಡುವ ಮೂಲಕ ಜೀವನದಲ್ಲಿ ಸಾರ್ಥಕತೆ ಮೆರೆಯಬೇಕು' ಎಂದು ಶಾಸಕ ಎಸ್.ಮುನಿರಾಜು ತಿಳಿಸಿದರು.</p>.<p>ಬಾಗಲಗುಂಟೆಯ ಶ್ರೀಸಾಯಿ ಕಲ್ಯಾಣ ಮಂಟಪದಲ್ಲಿ ತಮ್ಮ ಜನ್ಮದಿನದ ಪ್ರಯುಕ್ತ ಕಾರ್ಯಕರ್ತರು ಆಯೋಜಿಸಿದ್ದ 'ಅಭಿಮಾನೋತ್ಸವ' ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜೀವಿತ ಅವಧಿಯಲ್ಲಿ ಸಮಾಜಕ್ಕೆ ನಾವು ನೀಡುವ ಕೊಡುಗೆ ಶಾಶ್ವತವಾಗಿ ಉಳಿಯಲಿದೆ. ಆದ್ದರಿಂದ, ಮೌಲ್ಯಯುತವಾಗಿ ಸೇವೆ ಮಾಡಿ' ಎಂದು ಮನವಿ ನೀಡಿದರು.</p>.<p>‘ಹಾರ ತುರಾಯಿ ಬದಲಿಗೆ ಸಾವಿರಾರು ಪುಸ್ತಕಗಳನ್ನು ಜನರು ಉಡುಗೊರೆಯಾಗಿ ನೀಡಿದ್ದಾರೆ. ಅವುಗಳನ್ನು ಕ್ಷೇತ್ರದ ಸರ್ಕಾರಿ ಶಾಲಾ– ಕಾಲೇಜುಗಳಿಗೆ ನೀಡುತ್ತೇನೆ' ಎಂದರು.</p>.<p>ಜನ್ಮದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. </p>.<p>ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ಸೌಂದರ್ಯ ಅವರ ನೇತೃತ್ವದಲ್ಲಿ ಬಡವರಿಗೆ ತಳ್ಳುವ ಗಾಡಿಯನ್ನು ಮುನಿರಾಜು ವಿತರಿಸಿದರು.</p>.<p>ಇದೇ ವೇಳೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಟ್ಯಾಕ್ಸಿಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>