<p><strong>ಬೆಂಗಳೂರು:</strong> ‘ಪ್ರಧಾನಿ ನರೇಂದ್ರ ಮೋದಿ ಅವರ ಮನೆಯ ಮೇಲೆ ಮೊದಲು ಬಾಂಬ್ ದಾಳಿ ನಡೆಸಬೇಕು’ ಎಂಬುದಾಗಿ ಹೇಳಿಕೆ ನೀಡಿ ಆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿದ್ದ ಹಾಕಿದ್ದ ಯುವಕನನ್ನು ಅಗ್ನೇಯ ವಿಭಾಗದ ಬಂಡೇಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.</p>.<p><strong>ವಿಡಿಯೊದಲ್ಲಿ ಏನಿತ್ತು?:</strong> </p><p>‘ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮನೆಯ ಮೇಲೆ ಪಾಕಿಸ್ತಾನ ಇನ್ನೂ ಏಕೆ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು, ಮೋದಿ. ಮೊದಲು ನರೇಂದ್ರ ಮೋದಿ ಅವರ ಮನೆಯ ಮೇಲೆ ಬಾಂಬ್ ಹಾಕಬೇಕು’ ಎಂದು ನವಾಜ್ ವಿಡಿಯೊದಲ್ಲಿ ಹೇಳಿದ್ದ.</p>.<p>ಆ ವಿಡಿಯೊವನ್ನು ‘ಪಬ್ಲಿಕ್ ಸರ್ವೆಂಟ್’ ಎಂಬ ಸಾಮಾಜಿಕ ಮಾಧ್ಯಮದ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ. ಬಂಡೇಪಾಳ್ಯ ಪೊಲೀಸ್ ಠಾಣೆಯ ಸಾಮಾಜಿಕ ಮಾಧ್ಯಮಗಳ ನಿಗಾ ವಿಭಾಗದ ಪೊಲೀಸರು ಆ ವಿಡಿಯೊ ಗಮನಿಸಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪ್ರಧಾನಿ ನರೇಂದ್ರ ಮೋದಿ ಅವರ ಮನೆಯ ಮೇಲೆ ಮೊದಲು ಬಾಂಬ್ ದಾಳಿ ನಡೆಸಬೇಕು’ ಎಂಬುದಾಗಿ ಹೇಳಿಕೆ ನೀಡಿ ಆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿದ್ದ ಹಾಕಿದ್ದ ಯುವಕನನ್ನು ಅಗ್ನೇಯ ವಿಭಾಗದ ಬಂಡೇಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.</p>.<p><strong>ವಿಡಿಯೊದಲ್ಲಿ ಏನಿತ್ತು?:</strong> </p><p>‘ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮನೆಯ ಮೇಲೆ ಪಾಕಿಸ್ತಾನ ಇನ್ನೂ ಏಕೆ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು, ಮೋದಿ. ಮೊದಲು ನರೇಂದ್ರ ಮೋದಿ ಅವರ ಮನೆಯ ಮೇಲೆ ಬಾಂಬ್ ಹಾಕಬೇಕು’ ಎಂದು ನವಾಜ್ ವಿಡಿಯೊದಲ್ಲಿ ಹೇಳಿದ್ದ.</p>.<p>ಆ ವಿಡಿಯೊವನ್ನು ‘ಪಬ್ಲಿಕ್ ಸರ್ವೆಂಟ್’ ಎಂಬ ಸಾಮಾಜಿಕ ಮಾಧ್ಯಮದ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ. ಬಂಡೇಪಾಳ್ಯ ಪೊಲೀಸ್ ಠಾಣೆಯ ಸಾಮಾಜಿಕ ಮಾಧ್ಯಮಗಳ ನಿಗಾ ವಿಭಾಗದ ಪೊಲೀಸರು ಆ ವಿಡಿಯೊ ಗಮನಿಸಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>