‘ರಾಜ್ಯದಲ್ಲಿರುವ ಕೆಐಎಡಿಬಿ, ಕೆಎಚ್ಬಿ, ಎನ್ಎಚ್ಎಐ ಸಂಸ್ಥೆಗಳು 2013ರ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಭೂಸ್ವಾಧಿನಪಡಿಸಿಕೊಂಡು, ರೈತರಿಗೆ ಪರಿಹಾರ ಹಾಗೂ ಪುನರ್ವಸತಿ ನೀಡುತ್ತಿವೆ. ಆದರೆ ಬಿಡಿಎ ಮಾತ್ರ ಬ್ರಿಟಿಷರ ಕಾಲದ 1894ರ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಯೋಜನೆ ರೂಪಿಸಿ ಪರಿಹಾರ ನೀಡುವುದಾಗಿ ಹೇಳುತ್ತಿರುವುದು ಖಂಡನೀಯ. ಪಿಆರ್ಆರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, ವಿಚಾರಣೆ ಹಂತದಲ್ಲಿವೆ’ ಎಂದು ತಿಳಿಸಿದರು.