<p><strong>ಬೆಂಗಳೂರು: </strong>ಸಬ್ ಇನ್ಸ್ಪೆಕ್ಟರ್ ಒಬ್ಬರ ಬೈಕ್ ಅಡ್ಡಗಟ್ಟಿ, ಸುಲಿಗೆಗೆ ಯತ್ನಿಸಿದ ಮೂರು ಮಂದಿ ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಪೀಣ್ಯದ ಬಾಲು, ಆಶಿತ್ ಗೌಡ ಹಾಗೂ ರವಿಕುಮಾರ್ ಬಂಧಿತರು.ಆರ್.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಎಚ್.ಎಲ್.ಕೃಷ್ಣ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.</p>.<p>‘ಜುಲೈ 3ರ ರಾತ್ರಿ ಕರ್ತವ್ಯ ಮುಗಿಸಿ ಕೃಷ್ಣ ಅವರು ರಾಜಗೋಪಾಲನಗರ ಅಂಚೆ ಕಚೇರಿ ರಸ್ತೆ ಮಾರ್ಗದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮೂವರು ಆರೋಪಿಗಳು ಬೈಕ್ ಅಡ್ಡಗಟ್ಟಿದ್ದರು. ಚಾಕು ತೋರಿಸಿ ನಿನ್ನ ಬಳಿ ಇರುವುದನ್ನು ಕೊಡು ಎಂದು ಹೆದರಿಸಿದ್ದರು’.</p>.<p>‘ಬಳಿಕ ಜೇಬಿನಲ್ಲಿದ್ದ ಮೊಬೈಲ್ ಕಸಿಯಲು ಯತ್ನಿಸಿದ್ದು, ಕೃಷ್ಣ ಅವರು ಧರಿಸಿದ್ದ ಪೊಲೀಸ್ ಚಿಹ್ನೆಯುಳ್ಳ ಹೆಲ್ಮೆಟ್ ಕಂಡು ಅಲ್ಲಿಂದ ಪರಾರಿಯಾದರು. ಈ ವೇಳೆ ಅವರು ಬಂದಿದ್ದ ಬೈಕ್ ಅಲ್ಲೇ ಬಿಟ್ಟು ಹೋಗಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಯ ಬೈಕ್ನೊಂದಿಗೆರಾಜಗೋಪಾಲನಗರ ಠಾಣೆಗೆ ತೆರಳಿದ್ದ ಕೃಷ್ಣ, ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು. ಮೂವರೂ ಆರೋಪಿಗಳನ್ನು ಬಂಧಿಸಲಾಗಿದೆ’.</p>.<p>‘ಆರೋಪಿ ರವಿಕುಮಾರ್ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಉಳಿದವರು ಸಣ್ಣಪುಟ್ಟ ಕೆಲಸ ಮಾಡುತ್ತಿದ್ದರು. ಮೂವರೂ ಸ್ನೇಹಿತರಾಗಿದ್ದು, ಸುಲಭವಾಗಿ ಹಣ ಸಂಪಾದಿಸಿ, ಮೋಜು ಮಾಡಲು ಸುಲಿಗೆ ಮಾಡುತ್ತಿದ್ದರು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಬ್ ಇನ್ಸ್ಪೆಕ್ಟರ್ ಒಬ್ಬರ ಬೈಕ್ ಅಡ್ಡಗಟ್ಟಿ, ಸುಲಿಗೆಗೆ ಯತ್ನಿಸಿದ ಮೂರು ಮಂದಿ ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಪೀಣ್ಯದ ಬಾಲು, ಆಶಿತ್ ಗೌಡ ಹಾಗೂ ರವಿಕುಮಾರ್ ಬಂಧಿತರು.ಆರ್.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಎಚ್.ಎಲ್.ಕೃಷ್ಣ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.</p>.<p>‘ಜುಲೈ 3ರ ರಾತ್ರಿ ಕರ್ತವ್ಯ ಮುಗಿಸಿ ಕೃಷ್ಣ ಅವರು ರಾಜಗೋಪಾಲನಗರ ಅಂಚೆ ಕಚೇರಿ ರಸ್ತೆ ಮಾರ್ಗದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮೂವರು ಆರೋಪಿಗಳು ಬೈಕ್ ಅಡ್ಡಗಟ್ಟಿದ್ದರು. ಚಾಕು ತೋರಿಸಿ ನಿನ್ನ ಬಳಿ ಇರುವುದನ್ನು ಕೊಡು ಎಂದು ಹೆದರಿಸಿದ್ದರು’.</p>.<p>‘ಬಳಿಕ ಜೇಬಿನಲ್ಲಿದ್ದ ಮೊಬೈಲ್ ಕಸಿಯಲು ಯತ್ನಿಸಿದ್ದು, ಕೃಷ್ಣ ಅವರು ಧರಿಸಿದ್ದ ಪೊಲೀಸ್ ಚಿಹ್ನೆಯುಳ್ಳ ಹೆಲ್ಮೆಟ್ ಕಂಡು ಅಲ್ಲಿಂದ ಪರಾರಿಯಾದರು. ಈ ವೇಳೆ ಅವರು ಬಂದಿದ್ದ ಬೈಕ್ ಅಲ್ಲೇ ಬಿಟ್ಟು ಹೋಗಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಯ ಬೈಕ್ನೊಂದಿಗೆರಾಜಗೋಪಾಲನಗರ ಠಾಣೆಗೆ ತೆರಳಿದ್ದ ಕೃಷ್ಣ, ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು. ಮೂವರೂ ಆರೋಪಿಗಳನ್ನು ಬಂಧಿಸಲಾಗಿದೆ’.</p>.<p>‘ಆರೋಪಿ ರವಿಕುಮಾರ್ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಉಳಿದವರು ಸಣ್ಣಪುಟ್ಟ ಕೆಲಸ ಮಾಡುತ್ತಿದ್ದರು. ಮೂವರೂ ಸ್ನೇಹಿತರಾಗಿದ್ದು, ಸುಲಭವಾಗಿ ಹಣ ಸಂಪಾದಿಸಿ, ಮೋಜು ಮಾಡಲು ಸುಲಿಗೆ ಮಾಡುತ್ತಿದ್ದರು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>