ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಶಾಸಕರಾದ ಸಿ.ಎನ್.ಅಶ್ವತ್ಥನಾರಾಯಣ, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಬಸವರಾಜ ದಢೇಸೂಗುರು ಅವರಿಗೆ ಆಯೋಗ ಸಮನ್ಸ್ ಜಾರಿ ಮಾಡಿತ್ತು. ಹಗರಣದ ದಾಖಲೆಗಳಿರುವ ಬಗ್ಗೆ ಹೇಳಿಕೆ ನೀಡಿದ್ದವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.