<p><strong>ಬೆಂಗಳೂರು</strong>: ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಬೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರಳಿ ಮೋಹನ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.</p>.<p>ಲಂಚ ಕೇಳಿದ ಆರೋಪದಡಿ ಬೈರಪ್ಪ ಹಾಗೂ ಮುರಳಿ ಮೋಹನ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ವರದಿ ಆಧರಿಸಿ ಇಬ್ಬರು ಪಿಎಸ್ಐಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸರು ಪೊಲೀಸರು.</p>.<p>ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬುವರು ನೀಡಿದ ದೂರು ಆಧರಿಸಿ ಇಬ್ಬರು ಪಿಎಸ್ಐಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಲೋಕಾಯುಕ್ತ ಕಚೇರಿಯಿಂದ ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆದು ಮಾಹಿತಿ ಕೋರಲಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಿಸಿದ್ದ ಕಾಂಪೌಂಡ್ ಅನ್ನು ಕೆಲವು ವ್ಯಕ್ತಿಗಳು ತೆರವು ಮಾಡಿ ಅತಿಕ್ರಮಣಕ್ಕೆ ಮುಂದಾಗಿದ್ದರು. ಆ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ಲಂಚ ಕೇಳಿದ್ದರು ಎಂಬ ಆರೋಪವಿದೆ.</p>.<p>‘ನಿವೇಶನವನ್ನು ಸುಪರ್ದಿಗೆ ಕೊಡಿಸಲು ಇಬ್ಬರು ಅಧಿಕಾರಿಗಳು ₹ 10 ಲಕ್ಷ ಕೇಳಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸುಬ್ರಮಣ್ಯಪುರ ಠಾಣೆಯ ಪಿಎಸ್ಐ ಬೈರಪ್ಪ ಹಾಗೂ ಕೆಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮುರಳಿ ಮೋಹನ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.</p>.<p>ಲಂಚ ಕೇಳಿದ ಆರೋಪದಡಿ ಬೈರಪ್ಪ ಹಾಗೂ ಮುರಳಿ ಮೋಹನ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಲೋಕಾಯುಕ್ತ ವರದಿ ಆಧರಿಸಿ ಇಬ್ಬರು ಪಿಎಸ್ಐಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸರು ಪೊಲೀಸರು.</p>.<p>ಪ್ರಶಾಂತ್ ನಗರದ ನಿವಾಸಿ ಶಿವಕುಮಾರ್ ಎಂಬುವರು ನೀಡಿದ ದೂರು ಆಧರಿಸಿ ಇಬ್ಬರು ಪಿಎಸ್ಐಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಲೋಕಾಯುಕ್ತ ಕಚೇರಿಯಿಂದ ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆದು ಮಾಹಿತಿ ಕೋರಲಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದಾರೆ. ಇವರ ಸಂಬಂಧಿ ಪುಟ್ಟಸ್ವಾಮಿ ಅವರಿಗೆ ಸೇರಿದ ನಿವೇಶನದ ಸುತ್ತ ನಿರ್ಮಿಸಿದ್ದ ಕಾಂಪೌಂಡ್ ಅನ್ನು ಕೆಲವು ವ್ಯಕ್ತಿಗಳು ತೆರವು ಮಾಡಿ ಅತಿಕ್ರಮಣಕ್ಕೆ ಮುಂದಾಗಿದ್ದರು. ಆ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ಲಂಚ ಕೇಳಿದ್ದರು ಎಂಬ ಆರೋಪವಿದೆ.</p>.<p>‘ನಿವೇಶನವನ್ನು ಸುಪರ್ದಿಗೆ ಕೊಡಿಸಲು ಇಬ್ಬರು ಅಧಿಕಾರಿಗಳು ₹ 10 ಲಕ್ಷ ಕೇಳಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>