<p><strong>ಬೆಂಗಳೂರು</strong>: ರೌಡಿಶೀಟರ್ ದಾಸನ ಜತೆಗೆ ಕೇಕ್ ಕತ್ತರಿಸಿ ಉಡುಗೊರೆ ಪಡೆದುಕೊಂಡಿದ್ದ ಯಲಹಂಕ ಉಪನಗರ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ಅವರನ್ನು ಅಮಾನತುಗೊಳಿಸಿ ಪೂರ್ವ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.</p>.<p>ಯಲಹಂಕ ಉಪ ವಿಭಾಗದ ಸಹಾಯಕ ಕಮಿಷನರ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸಲ್ಲಿಸಿದ ವರದಿ ಹಾಗೂ ಅದರ ಜತೆಗೆ ಲಗತ್ತಿಸಿರುವ ದಾಖಲೆಗಳನ್ನು ಆಧರಿಸಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಿಯಲ್ ಎಸ್ಟೇಟ್ಗೆ ಸಂಬಂಧಿಸಿದಂತೆ ಅಕ್ರಮ ಚಟುವಟಿಕೆಯಲ್ಲಿ ದಾಸ ಭಾಗಿ ಆಗಿದ್ದಾನೆ. ಆತನ ಜತೆಗೆ ಫೋಟೊ ತೆಗೆಸಿಕೊಂಡಿದ್ದು, ಸಮವಸ್ತ್ರದಲ್ಲಿ ಆತನ ಜತೆಗೆ ಜನ್ಮದಿನಾಚರಣೆಯ ಕೇಕ್ ಇಟ್ಟುಕೊಂಡು ಉಡುಗೊರೆ ಪಡೆಯುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಘಟನೆಯಿಂದ ಇಲಾಖೆಯು ಮುಜುಗರಕ್ಕೆ ಒಳಗಾಗಿದೆ. ಇಲಾಖೆಗೆ ಕೆಟ್ಟಹೆಸರು ಬರುವುದರ ಜತೆಗೆ ಸಮಾಜಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ನಾಗರಾಜ್ ಅವರು ದುರ್ನಡತೆ ತೋರಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೌಡಿಶೀಟರ್ ದಾಸನ ಜತೆಗೆ ಕೇಕ್ ಕತ್ತರಿಸಿ ಉಡುಗೊರೆ ಪಡೆದುಕೊಂಡಿದ್ದ ಯಲಹಂಕ ಉಪನಗರ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ಅವರನ್ನು ಅಮಾನತುಗೊಳಿಸಿ ಪೂರ್ವ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.</p>.<p>ಯಲಹಂಕ ಉಪ ವಿಭಾಗದ ಸಹಾಯಕ ಕಮಿಷನರ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸಲ್ಲಿಸಿದ ವರದಿ ಹಾಗೂ ಅದರ ಜತೆಗೆ ಲಗತ್ತಿಸಿರುವ ದಾಖಲೆಗಳನ್ನು ಆಧರಿಸಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಿಯಲ್ ಎಸ್ಟೇಟ್ಗೆ ಸಂಬಂಧಿಸಿದಂತೆ ಅಕ್ರಮ ಚಟುವಟಿಕೆಯಲ್ಲಿ ದಾಸ ಭಾಗಿ ಆಗಿದ್ದಾನೆ. ಆತನ ಜತೆಗೆ ಫೋಟೊ ತೆಗೆಸಿಕೊಂಡಿದ್ದು, ಸಮವಸ್ತ್ರದಲ್ಲಿ ಆತನ ಜತೆಗೆ ಜನ್ಮದಿನಾಚರಣೆಯ ಕೇಕ್ ಇಟ್ಟುಕೊಂಡು ಉಡುಗೊರೆ ಪಡೆಯುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಘಟನೆಯಿಂದ ಇಲಾಖೆಯು ಮುಜುಗರಕ್ಕೆ ಒಳಗಾಗಿದೆ. ಇಲಾಖೆಗೆ ಕೆಟ್ಟಹೆಸರು ಬರುವುದರ ಜತೆಗೆ ಸಮಾಜಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ನಾಗರಾಜ್ ಅವರು ದುರ್ನಡತೆ ತೋರಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>