ಬೆಂಗಳೂರು: ಕರ್ನಾಟಕ ಎಸ್ಸಿ, ಎಸ್ಟಿ ಉಪ ಯೋಜನೆ ಕಾಯ್ದೆ ಸೆಕ್ಷನ್ 7(ಡಿ) ರದ್ದು ಪಡಿಸುವುದು ಹಾಗೂ ಪಿಟಿಸಿಎಲ್ ಕಾಯ್ದೆ(ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂಪರಭಾರೆ ನಿಷೇಧ ಕಾಯ್ದೆ)ಗೆ ತಿದ್ದುಪಡಿ ತಂದು ಪರಿಶಿಷ್ಟರ ಭೂಮಿ ರಕ್ಷಣೆ ಮಾಡುವಂತೆ ಆಗ್ರಹಿಸಿ, ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.