ವಿವಿಧ ವಿಷಯ, ಮೀಸಲಾತಿ ಆಧಾರದಲ್ಲಿ ಸಿದ್ಧವಾಗಿದ್ದ ಆಯ್ಕೆಪಟ್ಟಿ ಅನುಸಾರ ಅಭ್ಯರ್ಥಿಗಳಿಗೆ 2020ರಲ್ಲಿ ನೇಮಕಾತಿ ಆದೇಶ ನೀಡಲಾಗಿತ್ತು. ಅಂದು 48 ಅಭ್ಯರ್ಥಿಗಳು ವಿವಿಧ ಕಾರಣಗಳಿಂದ ಉಪನ್ಯಾಸಕರ ಹುದ್ದೆಗೆ ವರದಿ ಮಾಡಿಕೊಂಡಿರಲಿಲ್ಲ. ಖಾಲಿ ಉಳಿದಿದ್ದ ಆ ಹುದ್ದೆಗಳಿಗೆ ಈಚೆಗೆ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಜ್ಯೇಷ್ಠತೆ ಉಲ್ಲಂಘಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿತ್ತು. ಈ ಕುರಿತು ‘ಪ್ರಜಾವಾಣಿ’ ಆ.27ರ ಸಂಚಿಕೆಯಲ್ಲಿ ‘ನಿಯಮ ಉಲ್ಲಂಘಿಸಿ ನೇಮಕ’ ಶೀರ್ಷಿಕೆ ಅಡಿ ವಿಶೇಷ ವರದಿ ಪ್ರಕಟಿಸಿತ್ತು.